Advertisement

ಆಯುಷ್ಮಾನ್‌ನಲ್ಲಿ ಕೋವಿಡ್‌ಗೆ ಚಿಕಿತ್ಸೆ

07:49 AM Jul 10, 2020 | mahesh |

ಮಂಗಳೂರು: ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಅದರಲ್ಲಿ ಕೋವಿಡ್‌-19 ಚಿಕಿತ್ಸೆಯೂ ಸೇರ್ಪಡೆಯಾಗಿದೆ.

Advertisement

ದ.ಕ. ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ಅಲ್ಲಿ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಬಿಪಿಎಲ್‌ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಎಪಿಎಲ್‌ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್‌ ದರದ ಶೇ. 30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ. ಆಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಸಹಾಯ ವಾಣಿ 104 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next