Advertisement

ಲಸಿಕೆ ಪಡೆದು ಸುರಕ್ಷಿತವಾಗಿರಿ

07:44 PM Jun 22, 2021 | Team Udayavani |

ಹಾಸನ: ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆದುಕೊಂಡು ಸುರಕ್ಷಿತವಾಗಿರಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.

Advertisement

ನಗರದ ಸರ್ಕಾರಿ ನರ್ಸಿಂಗ್‌ ಕಾಲೇಜಿನಲ್ಲಿ 18 ವರ್ಷ ಮೇಲ್ಪಟ್ಟ ಆದ್ಯತಾ ವಲಯದ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ 18 ವರ್ಷಮೇಲ್ಪಟ್ಟ ಆದ್ಯತಾ ವಲಯದವರಿಗೆ ಅಭಿಯಾನ ರೂಪದಲ್ಲಿ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆನೀಡಲಾಗುವುದು ಎಂದರು.

ಜಿಲ್ಲೆಯಾದ್ಯಂತ ಲಸಿಕಾಕೇಂದ್ರಗಳನ್ನು ತೆರೆದುಕೋವ್ಯಾಕ್ಸಿನ್‌ ಮತ್ತುಕೋವಿಶೀಲ್ಡ್‌ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ಹಿಂಜರಿಕೆಯಿಲ್ಲದೆ ಲಸಿಕೆ ಹಾಕಿಸಿಕೊಂಡರೆ ಕೊರೊನಾ 3ನೇ ಅಲೆಯಿಂದಸುರಕ್ಷಿತವಾಗಿರಬಹುದು ಎಂದು ಹೇಳಿದರು. ಜಿಪಂ ಸಿಇಒ ಬಿ.ಎ.ಪರಮೇಶ್‌, ಹಿಮ್ಸ್‌ ನಿರ್ದೇಶಕ ಡಾ.ರವಿಕುಮಾರ್‌, ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ, ಡಿಎಚ್‌ಒ ಡಾ.ಸತೀಶ್‌ ಕುಮಾರ್‌, ಜಿಲ್ಲಾ ಆರ್‌ಸಿಎಚ್‌ಅಧಿಕಾರಿ ಡಾ.ಕಾಂತರಾಜ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next