Advertisement

ಭಯಪಡುವ ಅವಶ್ಯಕತೆ ಇಲ್ಲ: ಚಾಮರಾಜನಗರದಲ್ಲಿ ಮೊದಲ ಲಸಿಕೆ ಪಡೆದ ಮಂಜುನಾಥ್ ಅವರ ಅಭಿಪ್ರಾಯ

02:08 PM Jan 16, 2021 | Team Udayavani |

ಚಾಮರಾಜನಗರ : ಕೋವಿಡ್ ಲಸಿಕೆಯಿಂದ ಜನ ಭಯಪಡುವ ಅವಶ್ಯಕತೆ ಇಲ್ಲ ಎಂದು ಚಾಮರಾಜನಗರದಲ್ಲಿ ಮೊದಲ ಲಸಿಕೆ ಪಡೆದ ಡಿ ಗ್ರೂಪ್ ನೌಕರ ಮಂಜುನಾಥ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

ಜಿಲ್ಲೆಯಾದ್ಯಂತ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕಾ ಅಭಿಯಾನಕ್ಕೆ ಚಾಲನೆ. ಚಾಮರಾಜನಗರದ ಸರ್ಕಾರಿ ವೈದ್ಯಕೀಯ ಕಾಲೇಜ್ ನಲ್ಲಿ ಡಿ ಗ್ರೂಪ್ ನೌಕರ ಮಂಜುನಾಥ್ ಎಂಬುವರಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು.

ಲಸಿಕೆಯನ್ನು ಎರಡನೆಯವರಾಗಿ ಡಾ.‌ಸಂಜೀವ್ ಅವರೇ ಪಡೆದು ಇತರರಲ್ಲೂ ವಿಶ್ವಾಸ ಮೂಡಿಸಿದರು.
ಜಿಲ್ಲೆಯ ಕೊಳ್ಳೇಗಾಲದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿ ಗ್ರೂಪ್ ನೌಕರ ಪ್ರಕಾಶ್ ಎಂಬಾತ ಕೊಳ್ಳೇಗಾಲ ತಾಲೂಕಿನಲ್ಲಿ ಮೊದಲಿಗನಾಗಿ ಲಸಿಕೆ ಪಡೆದು ಕೊಂಡಿದ್ದಾರೆ.

ಲಸಿಕೆ ಕುರಿತು ಮಾತನಾಡಿದ ಮಂಜುನಾಥ್ ಅವರು ಮೊದಲು ಹೇಗಿದ್ದೆನೋ ಈಗಲು ಹಾಗೆಯೆ ಇದ್ದೇನೆ ಜನ ಭಯಪಡುವ ಅವಶ್ಯಕತೆ ಇಲ್ಲ, ಜ್ವರ ಬಂದರೆ ಇಂಜೆಕ್ಷನ್ ತೆಗೆದುಕೊಳ್ಳುವುದಿಲ್ಲವೇ, ಹಾಗೆಯೇ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದೇನೆ ಯಾವುದೇ ತೊಂದರೆ ಇಲ್ಲದೆ ಆರಾಮವಾಗಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ

Advertisement

ಮೊದಲನೆ ಹಂತದಲ್ಲಿ 814 ಮಂದಿಗೆ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಮೊದಲ ದಿನ 600 ಜನರಿಗೆ ಅಂತೆಯೇ ಸೋಮವಾರ ಉಳಿದ 214 ಮಂದಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಮದ್ಯಾಹ್ನದ ವರೆಗೆ ಸುಮಾರು 320 ಮಂದಿಗೆ ಲಸಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next