Advertisement

ಕೋವಿಡ್‌ ಲಸಿಕೆ ವಿರುದ್ಧ ಅಪಪ್ರಚಾರ ಮಾಡಿಲ್ಲ

12:58 PM Jun 05, 2021 | Team Udayavani |

ಚಿತ್ರದುರ್ಗ: ಕೋವಿಡ್‌ ಲಸಿಕೆ ಕುರಿತು ಇರುವ ಗೊಂದಲಗಳನ್ನು ನಿವಾರಿಸುವಂತೆ ಕಾಂಗ್ರೆಸ್‌ ಹೇಳಲಾಗಿದೆಯೇ ಹೊರತು ಲಸಿಕೆ ವಿರುದ್ಧ ಅಪಪ್ರಚಾರ ಮಾಡಿಲ್ಲ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.

Advertisement

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೋವಿಡ್ ನಿಯಂತ್ರಣದ ವಿಚಾರದಲ್ಲಿ ವೈಫಲ್ಯ ಅನುಭವಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಪ್ರತಿಪಕ್ಷಗಳ ಮೇಲೆ ಇಲ್ಲಸಲ್ಲದ್ದನ್ನು ಹೇಳಿ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಕೋವಿಡ್‌ 19 ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಲಾಗದ ರಾಜ್ಯ ಸರ್ಕಾರ ಪಕ್ಷದ ಮುಖಂಡರ ಮೂಲಕ ಅಸಂಬದ್ಧ ಹೇಳಿಕೆಗಳನ್ನು ಕೊಡಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಕೂಡಾ ಜವಾಬ್ದಾರಿಯಿಂದ ಹೇಳಿಕೆ ಕೊಡಬೇಕು ಎಂದರು.

ಕೋವಿಡ್‌ ಹತೋಟಿಗೆ ತರುವ ಸರ್ಕಾರಗಳ ಪ್ರಯತ್ನದ ಜತೆಗೆ ಕಾಂಗ್ರೆಸ್‌ ಪಕ್ಷದ ಸಹಕಾರ ಇದ್ದೇ ಇರುತ್ತದೆ. ಬೆಳೆ ವಿಮೆ ಪರಿಹಾರದ ಮೊತ್ತವನ್ನು ಶೀಘ್ರ ರೈತರಿಗೆ ಜಮಾ ಮಾಡಬೇಕು. ಈವರೆಗೆ ಪರಿಹಾರ ನೀಡದಿರುವುದನ್ನು ಖಂಡಿಸಿ ರೈತರು ಜೂನ್‌ 10 ರಂದು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ತಿಳಿಸಿದರು.

ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್‌. ಮಂಜುನಾಥ್‌ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ ಪರಿಹಾರದ ಮೊತ್ತವನ್ನು 10 ಸಾವಿರ ರೂ.ಗೆ ಹೆಚ್ಚಿಸುವಂತೆ ಒತ್ತಾಯಿಸಿದರು.

Advertisement

ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರಿದ್ದಾರೆ. ಕಟ್ಟಡ ಕಾರ್ಮಿಕರಿಗೆ ಅವರು ಕಟ್ಟಿರುವ ವಿಮಾ ಕಂತಿನ ಮೊತ್ತದಲ್ಲೇ ಪರಿಹಾರ ಕೊಡಲಾಗುತ್ತದೆ ಹೊರತು ಇದಕ್ಕಾಗಿ ಸರ್ಕಾರ ಪ್ರತ್ಯೇಕ ಅನುದಾನ ಕೊಟ್ಟಿಲ್ಲ.ಶನಿವಾರದಿಂದ ಕಾಂಗ್ರೆಸ್‌ ಕಾರ್ಯಕರ್ತರು ಪರಿಹಾರಕ್ಕಾಗಿ ಅಸಂಘಟಿತ ಕಾರ್ಮಿಕರ ಹೆಸರು ನೋಂದಾಯಿಸುವ ಕೆಲಸ ಆರಂಭಿಸಲಿದ್ದಾರೆ.

ರಾಜ್ಯದಲ್ಲಿ 12 ಲಕ್ಷಕ್ಕೂ ಅಧಿಕ ಬ್ಯಾಡ್ಜ್ ಹೊಂದಿರುವ ಎಲ್ಲ ಟ್ಯಾಕ್ಸಿ ಆಟೋ ಹಾಗೂ ಕ್ಯಾಬ್‌ ಚಾಲಕರಿಗೆ ಪರಿಹಾರ ಕೊಡಬೇಕು. ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಬೀದಿ ವ್ಯಾಪಾರಿಗಳಿದ್ದಾರೆ. ಬಿಜೆಪಿ ನಾಯಕರು ಸುಖಾಸುಮ್ಮನೆ ಕಾಂಗ್ರೆಸ್‌ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಲಸಿಕೆ ವಿರುದ್ಧ ಕಾಂಗ್ರೆಸ್‌ ಅಪ್ರಚಾರ ಮಾಡಿದೆ ಎನ್ನುವುದಕ್ಕೆ ದಾಖಲೆ ಒದಗಿಸಿ ಎಂದು ಸವಾಲು ಹಾಕಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಕೆ. ತಾಜ್‌ಪೀರ್‌ ಮಾತನಾಡಿ, ದೇಶದ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ ಎಂದರು. ಜಿಪಂ ಮಾಜಿ ಸದಸ್ಯ ಯೋಗೇಶ್‌ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಜಿಲ್ಲೆಯಲ್ಲಿರದೆ ಚಿತ್ರದುರ್ಗಕ್ಕೆ ಅತಿಥಿಯಾಗಿದ್ದಾರೆ ಎಂದು ಟೀಕಿಸಿದರು.

ಮಾಜಿ ಶಾಸಕ ಡಿ.ಸುಧಾಕರ್‌, ಜಿಲ್ಲಾ ಕಾರ್ಯಾಧ್ಯಕ್ಷ ಹಾಲೇಶಪ್ಪ, ಮುಖಂಡರಾದ ಭೀಮಸಮುದ್ರದ ಜಿ.ಎಸ್‌. ಮಂಜುನಾಥ್‌, ಎನ್‌.ಡಿ.ಕುಮಾರ್‌, ಸಂಪತ್‌ಕುಮಾರ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next