Advertisement

ಉಡುಪಿ : ಪತ್ರಕರ್ತರಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನ

07:10 PM May 12, 2021 | Team Udayavani |

ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಜಿಲ್ಲೆಯ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರಿಗೆ ಉಚಿತ ಕೋವಿಶೀಲ್ಡ್ ಮೊದಲ ಡೋಸನ್ನು ನೀಡಲಾಯಿತು.

Advertisement

ಬ್ರಹ್ಮಗಿರಿ ಪ್ರೆಸ್ ಕ್ಲಬ್‌ ಸಮೀಪದ ಐಎಂಎ ಭವನದಲ್ಲಿ ನಡೆದ ಉಚಿತ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಜಿಲ್ಲೆಯ 130 ಮಂದಿ ಪತ್ರಕರ್ತರು ಹಾಗೂ ಟಿವಿ ಮಾಧ್ಯಮದವರು ಮೊದಲ ಡೋಸನ್ನು ಪಡೆದುಕೊಂಡರು. ಮೊದಲ ಡೋಸ್‌ ಪಡೆದು ಅವಧಿ ಮುಗಿದವರು ಎರಡನೇ ಡೋಸ್‌ ಕೂಡ ಈ ಸಂದರ್ಭ ಪಡೆದುಕೊಂಡರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಕೊರೋನಾ ಲಸಿಕಾ ನೋಡೆಲ್‌ ಅಧಿಕಾರಿ ಡಾ| ಎಂ.ಜಿ.ರಾಮ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್‌, ಸಂಘದ ಅಧ್ಯಕ್ಷ ರಾಜೇಶ್‌ ಶೆಟ್ಟಿ ಅಲೆವೂರು, ಕಾರ್ಯದರ್ಶಿ ನಝೀರ್‌ ಪೊಲ್ಯ, ಕೋಶಾಧಿಕಾರಿ ಉಮೇಶ್‌ ಮಾರ್ಪಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ :ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ:  ಸುರೇಶ್ ಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next