Advertisement

ಕೋವಿಡ್ ವಾರಿಯರ್ಸ್ ರಕ್ಷಣೆ ಪ್ರತಿಯೊಬ್ಬರ ಹೊಣೆ

08:33 AM Jun 10, 2020 | Suhan S |

ಹಿರಿಯೂರು: ರಾಜ್ಯದಲ್ಲಿ ಕೋವಿಡ್ದಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಕೋವಿಡ್  ವಾರಿಯರ್ಸ್‌ ಆಗಿ ಕೆಲಸ ನಿರ್ವಹಿಸುವ ಮೂಲಕ ಜನರ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವಾಸಿಸುವ ಪ್ರದೇಶದ ಸ್ವಚ್ಛತೆ ಕಾಪಾಡುವ ಹಾಗೂ ಅಭಿವೃದ್ಧಿಪಡಿಸಬೇಕಿದೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಹೇಳಿದರು.

Advertisement

ನಗರದ ಪೊಲೀಸ್‌ ಕ್ವಾಟರ್ಸ್‌ನಲ್ಲಿ ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ರಕ್ಷಣೆ ಎಲ್ಲರ ಹೊಣೆ ಎಂದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಡಿ.ಟಿ. ಶ್ರೀನಿವಾಸ್‌, ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್‌, ನಗರಸಭೆ ಸದಸ್ಯರುಗಳಾದ ಮಹೇಶ್‌ ಪಲ್ಲವ, ಬಾಲಕೃಷ್ಣ, ಚಿರಂಜೀವಿ, ಡಿವೈಎಸ್ಪಿ ರೋಷನ್‌ ಜಮೀರ್‌, ಸಿಪಿಐ ರಾಘವೇಂದ್ರ, ಪಿಎಸ್‌ ಐಗಳಾದ ಪರಮೇಶ್‌, ಅನುಸೂಯಮ್ಮ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next