Advertisement

ರಾಜ್ಯಾಂದ್ಯಂತ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ; ಹೊಸ ವರ್ಷಾಚರಣೆಗೆ ಬ್ರೇಕ್ !

01:14 PM Dec 23, 2020 | Mithun PG |

ಬೆಂಗಳೂರು: ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

Advertisement

ಕೋವಿಡ್  ಸೋಂಕಿನ ರೂಪಾಂತರ ಹಾವಳಿ ಭೀತಿ ಹೆಚ್ಚಾಗಿರುವುದರಿಂದ ಇಂದಿನಿಂದ 9 ದಿನಗಳ ಕಾಲ ಪ್ರತಿದಿನ  ರಾತ್ರಿ  10ರಿಂದ ಬೆಳಗ್ಗೆ 6 ರವರೆಗೆ ಈ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ವ್ಯಾಪಾರ-ವಹಿವಾಟುಗಳು , ಬಸ್ ಸಂಚಾರ, ಪಬ್ -ಬಾರ್  ಮುಂತಾದವುಗಳು ಬಂದ್ ಆಗಿರುತ್ತವೆ ಎಂದು ತಿಳಿಸಿದ್ದಾರೆ

ಇದರಿಂದ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೂ ಬ್ರೇಕ್ ಬಿದ್ದಂತಾಗಿದ್ದು, ‘ನವರಾತ್ರಿ’ಗಳ ಕಾಲ ಕರುನಾಡು ಸಂಪೂರ್ಣ ಸ್ಥಬ್ಥವಾಗಲಿದೆ.

ಇಂದು ಸಂಜೆ 5 ಗಂಟೆಗೆ ನೈಟ್ ಕರ್ಫ್ಯೂ ಕುರಿತ ಮಾರ್ಗಸೂಚಿ ಹೊರಬೀಳಲಿದೆ. ಬ್ರಿಟನ್ ನಿಂದ ಬರುವಂತವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಮೂಲಕ ಹೊಸ ಕೋವಿಡ್ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

updating…

Advertisement
Advertisement

Udayavani is now on Telegram. Click here to join our channel and stay updated with the latest news.

Next