Advertisement

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೋರ್ವನಿಗೆ ಕೋವಿಡ್-19 ಸೋಂಕು ದೃಢ

12:53 PM May 26, 2020 | keerthan |

ಬೆಂಗಳೂರು: ಮಾಗಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು  ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

Advertisement

ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ಅವರ ಜೊತೆಗೆ ಪ್ರಯಾಣಿಸಿದವರನ್ನ ತಪಾಸಣೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ರೆಡ್ ಝೋನ್ ಹಾಗೂ ಕಂಟೋನ್ಮೆಂಟ್ ಝೋನ್ ನಿಂದ ಬಂದು ಕೆಲಸ ಮಾಡುತ್ತಿರುವವರಿಗೂ ಜೊತೆಗೆ ಅವರ ಸಂಪರ್ಕದಲ್ಲಿ ಇರುವವರಿಗೂ ಟೆಸ್ಟ್ ಮಾಡಿಸುತ್ತೇವೆ. ರಾಜ್ಯಾದ್ಯಂತ ಕೋವಿಡ್-19 ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದರು.

ಆಯುಷ್ ವೈದ್ಯರ ಪ್ರತಿಭಟನೆ ವಿಚಾರ,ಅವರ ಸಮಸ್ಯೆಗಳ ಸಂಬಂಧಪಟ್ಟಂತೆ ಈಗ ಸಭೆ ನಡೆಸಲಾಗುತ್ತಿದೆ. ಆಯುಷ್ ವೈದ್ಯರು ನನ್ನ ಮುಂದೆ ಹಲವು ಬೇಡಿಕೆಗಳನ್ನ ಇಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಈ ಸಮಸ್ಯೆಗಳು ಹಾಗೇ ಇವೆ. ಎಂಬಿಬಿಎಸ್ ವೈದ್ಯರ ಸಮನಾಗಿ ಆಯುಷ್ ವೈದ್ಯರು ವೇತನ ಕೇಳಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಒಂದು ಸಮಿತಿ ಮಾಡುತ್ತೇವೆ. ಆ ಸಮಿತಿ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next