Advertisement

ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ವೃದ್ಧ ವಾಸವಿದ್ದ ವಾರ್ಡ್ ಗೆ ಜಿಲ್ಲಾಧಿಕಾರಿಗಳ ಭೇಟಿ

09:57 AM Mar 14, 2020 | Mithun PG |

ಕಲಬುರಗಿ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ವಾಸವಿದ್ದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಶರತ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಸೋಂಕು ಹರಡುವಿಕೆಗೆ ತಡೆಗಟ್ಟಬಹುದಾದ ಕ್ರಮಗಳನ್ನು ಸ್ಥಳೀಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.

Advertisement

ವ್ಯಕ್ತಿಯ ಮನೆಯಿರುವ ವಾರ್ಡ್ ಅನ್ನು ಆಡಳಿತ ಬ್ಲಾಕ್/ಕಂಟೇನ್ ಮೆಂಟ್ ಝೋನ್ ಎಂದು ಪರಿಗಣಿಸಿ ಇಲ್ಲಿಂದ‌ ಬೇರೆ ಪ್ರದೇಶಕ್ಕೆ ಸೋಂಕು ಹರಡದಂತೆ ಮುಂಜಾಗ್ರತವಾಗಿ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಐ.ಇ.ಸಿ ಚಟುವಟಿಕೆಗಳು ತ್ವರಿತಗತಿಯಲ್ಲಿ ನಡೆಸಬೇಕು. ಇನ್ನು ಕಂಟೇನ್ ಮೆಂಟ್ ಝೋನ್ ಸುತ್ತಮುತ್ತ 5 ಕಿ.ಮೀ ಪ್ರದೇಶ ಬಫರ್ ಝೋನ್ ಎಂದು ಗುರುತಿಸಿ ಸೊಂಕಿನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು ಎಂದು ಪಾಲಿಕೆ ಮತ್ತು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಎಸ್.ಪಿ.ಯಡಾ‌ ಮಾರ್ಟಿನ್, ಡಿಸಿಪಿ ಕಿಶೋರ್ ಬಾಬು,  ಸಿಇಓ ಡಾ.ಪಿ‌.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಸೇರಿದಂತೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next