Advertisement

“ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ನಡೆಸೋರಿಗೆ ದೇಶದಲ್ಲಿ ಜಾಗವಿಲ್ಲ”

03:44 PM Jul 21, 2017 | Team Udayavani |

ನವದೆಹಲಿ: ಗೋ ರಕ್ಷಣೆಯ ಹೆಸರಿನಲ್ಲಿ ನಡೆಸುವ ಯಾವುದೇ ರೀತಿಯ ಹಿಂಸಾಚಾರವನ್ನು ಯಾವ ರಾಜ್ಯವೂ ಬೆಂಬಲಿಸಬಾರದು. ಅಲ್ಲದೇ ಕಾನೂನಿನ ಪ್ರಕಾರ ಹಿಂಸಾಚಾರ ನಡೆಸುವ ಇಂತಹ ಗುಂಪುಗಳಿಗೆ ದೇಶದಲ್ಲಿ ಜಾಗವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

Advertisement

ಗೋ ರಕ್ಷಣೆ ಹೆಸರಿನಲ್ಲಿನ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋ ರಕ್ಷಣೆ ಹೆಸರಿನಲ್ಲಿನ ಹಿಂಸಾಚಾರವನ್ನು ಹೇಗೆ ಮಟ್ಟ ಹಾಕುತ್ತಾರೆ ಎಂಬ ಬಗ್ಗೆ ಎಲ್ಲಾ ರಾಜ್ಯಗಳು ಅಫಿಡವಿಟ್ ಸಲ್ಲಿಸಲಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಏತನ್ಮಧ್ಯೆ ಬಿಜೆಪಿ ಆಡಳಿತ ಹೊಂದಿರುವ ಗುಜರಾತ್ ಮತ್ತು ಜಾರ್ಖಂಡ್, ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂಕೋರ್ಟ್ ಗೆ ತಿಳಿಸಿದೆ. 

ಗೋ ರಕ್ಷಕ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಗೋ ರಕ್ಷಣೆಯ ಹೆಸರಿನಲ್ಲಿ ಈ ಗುಂಪುಗಳು ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯವನ್ನು ಗುರಿಯಾಗಿರಿಸಿ ಹಲ್ಲೆ ನಡೆಸುತ್ತಿರುವುದಾಗಿ ಅರ್ಜಿಯಲ್ಲಿ ದೂರಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತರ ನೀಡುವಂತೆ ಈ ಮೊದಲು ಸುಪ್ರೀಂಕೋರ್ಟ್ ನೋಟಿಸ್ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next