Advertisement

Kelinja: ರಸ್ತೆ ಬದಿಯಲ್ಲಿ ದನದ ಕಿವಿ, ಚರ್ಮ ಪತ್ತೆ

12:31 PM Oct 20, 2023 | Team Udayavani |

ವಿಟ್ಲ:  ಕೆಲಿಂಜ ಕೊಟ್ಟಾರಿ ಕಟ್ಟೆ ಬಸ್ ನಿಲ್ದಾಣದ ಸಮೀಪ ರಸ್ತೆ ಬದಿಯಲ್ಲಿ ದನದ ಕಿವಿ ಹಾಗೂ ಚರ್ಮ ಪತ್ತೆಯಾದ ಘಟನೆ ಸಂಭವಿಸಿದೆ.

Advertisement

ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್‌ ನಿಲ್ದಾಣದ ಬಳಿ ಅ.20ರಂದು ಮುಂಜಾನೆ ದನದ ಕಿವಿ ಮತ್ತು ಚರ್ಮ ಪತ್ತೆಯಾಗಿದೆ.

ಸ್ಥಳೀಯರು ವಿಟ್ಲ ಠಾಣಾ ಪೊಲೀಸರಿಗೆ  ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

ಸ್ಥಳದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ನೆರೆದಿದ್ದು, ಘಟನೆಯ ಬಗ್ಗೆ‌ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next