Advertisement

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ದೇವರ ದರ್ಶನ ಪಡೆದ ಯೋಗೀಶ್ವರ್ ಕುಟುಂಬ

09:50 PM Aug 29, 2020 | sudhir |

ಹನೂರು (ಚಾಮರಾಜನಗರ) : ವಿಧಾನರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಅವರು ಕುಟುಂಬ ಸಮೇತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Advertisement

ವಿಧಾನಪರಿಷತ್ ಸದಸ್ಯ ಸಿ.ಪಿಯೋಗೀಶ್ವರ್ ಅವರು ಅವರ ಜನ್ಮದಿನದ ಹಿನ್ನೆಲೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಶಾಸಕರನ್ನು ಪ್ರಾಧಿಕಾರದವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಸ್ವಾಮಿಯ ದಶ್ನ ಪಡೆದರು. ದರ್ಶನದ ಬಳಿಕ ದೇವಾಲಯದ ಕಚೇರಿಗೆ ಆಗಮಿಸಿದ ಶಾಸಕರು ಶ್ರೀ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ಭಕ್ತಾದಿಗಳಿಗೆ ಕಲಿಸಿರುವ ಮೂಲಕ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಭಕ್ತಾದಿಗಳ ಮೂಲ ಸೌಕರ್ಯಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಬಳಿಕ ಸಾಲೂರು ಮಠಕ್ಕೆ ತೆರಳಿದ ಶಾಸಕರು ಶಾಂತ ಮಲ್ಲಿಕಾರ್ಜುನ ಸ್ವಾಮಿಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಆಗಮಿಕರಾದ ಕರವೀರಸ್ವಾಮಿ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next