Advertisement

ಬಿಜೆಪಿ ಶುದ್ಧ ಸರ್ಕಾರವಾಗಿ ಉಳಿದಿಲ್ಲ, ಮೂರು ಗುಂಪಿನ ಸರ್ಕಾರವಾಗಿದೆ : ಸಿ.ಪಿ ಯೋಗೇಶ್ವರ್

01:43 PM May 27, 2021 | Team Udayavani |

ಬೆಂಗಳೂರು : ನಾನು ದೆಹಲಿಗೆ ಹೋಗ್ತಿರ್ತೇನೆ ಬರ್ತಿರ್ತೇನೆ, ಪಕ್ಷ ನನ್ನ ಎಂಎಲ್.ಸಿ ಮಾಡಿದೆ, ಸಚಿವ ಸ್ಥಾನ‌ ನೀಡಿದೆ, ನಾನು ನನ್ನ ಕೆಲ ಭಾವನೆಗಳನ್ನ, ನನ್ನ ನೋವುಗಳನ್ನ ಹೈಕಮಾಂಡ್ ಮುಂದೆ ತೋಡಿಕೊಳ್ಳಬೇಕು, ಹೀಗಾಗಿ ದೆಹಲಿಗೆ ಹೋಗ್ತಿರ್ತೇನೆ, ಅದನ್ನ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಲಿಕ್ಕೆ ಸಾಧ್ಯವಿಲ್ಲ ಎಂದು ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

Advertisement

ನನ್ನ ನೋವುಗಳನ್ನ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡ್ತೇನೆ. ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿರೋದು ನನ್ನ ಗಮನಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡ್ತೇನೆ..
ನಾನು ಬೇರೆಯವರ ಮೇಲೆ ಯಾವುದೇ ಆರೋಪ ಮಾಡಿಲ್ಲ.ಮುಖ್ಯಮಂತ್ರಿ ಬದಲಾವಣೆ ನನ್ನ ಉದ್ದೇಶ ಅಲ್ಲ. ಆ ಶಕ್ತಿ ನನಗಿಲ್ಲ.
ನಾನು ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು.. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸ್ತಿದ್ದೇನೆ. ನನ್ನದೆ ಆದ ವಿಚಾರ ವನ್ನು ನಮ್ಮ‌ನಾಯಕರ ಮುಂದೆ ಹೇಳಿಕೊಂಡಿದ್ದೇನೆ.

ಇದೇ ವೇಳೆ ಸಿಎಂ ,ಬದಲಾವಣೆ ಬಗ್ಗೆ ಮಾತನಾಡಿದ ಅವರು,  ಆ ಸಂದರ್ಭ ಬಂದಾಗ ಚರ್ಚೆ ಮಾಡ್ತೇನೆ. ನಮ್ಮ ಬೆಂಬಲ ಇದೀಯೋ ಇಲ್ವೋ ಅನ್ನೋದನ್ನು ನಾಲ್ಕು ಗೋಡೆ ಮಧ್ಯೆ ತಿಳಿಸುತ್ತೇನೆ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ನನ್ನ ಅಧಿಕಾರದಲ್ಲಿ ನನ್ ಮಗ ಮೂಗು ತೂರಿಸಿದ್ರೆ ಸರಿಯಲ್ಲ ಅದು. ಆದ್ರೆ ರಾಜ್ಯದಲ್ಲಿ ಇದೇ‌ ನಡೀತಿರೋದು ಎಂದರು.

ಬಿ ವೈ ವಿಜಯೇಂದ್ರ ಹಸ್ತಕ್ಷೇಪ ಬಗ್ಗೆ ಪರೋಕ್ಷವಾಗಿ ಸಿಪಿವೈ ಆಕ್ಷೇಪ ಮಾಡಿದ್ದು, ಕೆಲವು ವಿಚಾರ ಹಂಚ್ಕೊಳ್ಳಲು ಆಗಲ್ಲ. ನಾನೊಬ್ಬ ಸಚಿವ ಇವತ್ತು ನನ್ನ ಸಚಿವಗಿರಿಯನ್ನು ನನ್ ಮಗ ಚಲಾಯಿಸಿದ್ರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸೋದು ಇಷ್ಟವಿಲ್ಲ ಇದನ್ನು ನಾನು ಸೂಕ್ಷ್ಮವಾಗಿ ಹೇಳಿದೀನಿ, ಅರ್ಥ ಮಾಡ್ಕೊಳ್ಳಿ ಪಕ್ಷದ ಕೆಲವು ಸ್ನೇಹಿತರು ನನ್ನ ಬಗ್ಗೆ ಮಾತಾಡ್ತಿರೋದು ಗೊತ್ತು. ಅದನ್ನ ಯಾರು ಮಾತಾಡಿಸ್ತಿರೋದು ಅಂತಲೂ ಗೊತ್ತು. ಯಾರ ಕುಮ್ಮಕ್ಕಿದೆ ಅಂತಲೂ ಗೊತ್ತು.

ಇಂದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡ್ಕೊಂಡಿವೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆ ಹೊಂದಾಣಿಕೆ ಮಾಡ್ಕೊಂಡಿದೆ ನಮ್ ಸರ್ಕಾರ ಎಂದು ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next