Advertisement

ದುಷ್ಕರ್ಮಿಗಳ ದಾಳಿ: ಸಿಪಿಐ ಶ್ರೀಮಂತ ಇಲ್ಲಾಳ ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ

11:07 AM Sep 26, 2022 | Team Udayavani |

ಕಲಬುರಗಿ: ಗಾಂಜಾ ಬೆಳೆಗಾರ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಇಲ್ಲಿನ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಮಲಾಪೂರ ಸಿ.ಪಿ.ಐ ಶ್ರೀಮಂತ ಇಲ್ಲಾಳ ಅವರನ್ನು ಸೋಮವಾರ ಬೆಳಿಗ್ಗೆ ಇಲ್ಲಿನ ಕಲಬುರಗಿ ವಿಮಾನ ನಿಲ್ದಾಣದಿಂದ ಏರ್ ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಯಿತು.

Advertisement

ಕಲಬುರಗಿ ಖಾಸಗಿ ಆಸ್ಪತ್ರೆ ಯಿಂದ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ಏರ್ ಲಿಪ್ಟ್ ಮಾಡಲಾಗಿದ್ದು, ಏರ್ ಆಂಬುಲೆನ್ಸ್ ನಲ್ಲಿ ಕುಟುಂಬದ ಇಬ್ಬರು ಮತ್ತು ವೈದ್ಯಕೀಯ ಸಿಬ್ಬಂದಿ ತೆರಳಲಿದ್ದಾರೆ.

ಇದನ್ನೂ ಓದಿ:ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 800ಕ್ಕೂ ಅಧಿಕ ಅಂಕ ಕುಸಿತ; ನಿಫ್ಟಿಯೂ ಭಾರೀ ಇಳಿಕೆ

ಕಲಬುರಗಿ ವಿಮಾನ ನಿಲ್ದಾಣದಿಂದ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ಏರ್ ಲಿಪ್ಟ್ ಆಗಲಿದೆ.

ಏರ್ ಲಿಫ್ಟ್ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಶಾಸಕ‌ ಬಸವರಾಜ ಮತ್ತಿಮೂಡ, ಎಸ್.ಪಿ‌. ಇಶಾ ಪಂತ್ ಸೇರಿದಂತೆ ಮುಂತಾದವರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next