Advertisement

19 ಸ್ಥಾನಗಳಲ್ಲಿ ಸ್ಪರ್ಧೆಗೆ ಸಿಪಿಎಂ ನಿರ್ಧಾರ: ಯೆಚೂರಿ

07:00 AM Mar 31, 2018 | Team Udayavani |

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಪ್ರಬಲ ಅಭ್ಯರ್ಥಿಗೆ ಬೆಂಬಲ
ನೀಡಲು ಸಿಪಿಎಂ ನಿರ್ಧರಿಸಿದೆ. ಜತೆಗೆ ಮೇ 12ರಂದು ನಡೆಯುವ ಚುನಾವಣೆಯಲ್ಲಿ 18-19 ಸ್ಥಾನಗಳಿಗೆ ಸ್ಪರ್ಧಿಸಲು
ನಿರ್ಧರಿಸಿರುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

Advertisement

ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಕೇಂದ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಇತರ ಕೋಮುಶಕ್ತಿಗಳನ್ನು ಚುನಾವಣೆಯಲ್ಲಿ ಸೋಲಿಸಲು ಮುಕ್ತ ಕರೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಎಡರಂಗವಾಗಿಯೇ ಕರ್ನಾಟಕದಲ್ಲಿ ಸ್ಪರ್ಧೆಗೆ ಇಳಿಯಲಿದೆ ಎಂದು ಯೆಚೂರಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next