Advertisement

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

01:13 PM Sep 26, 2020 | keerthan |

ಕುಂದಾಪುರ: ಬೈಂದೂರು – ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಆರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

Advertisement

ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ಹೊಸದಾಗಿ ನಿರ್ಮಾಣಗೊಂಡಿದ್ದ ಸೇತುವೆಯಾಗಿದ್ದರೂ ಬಿರುಕು ಕಾಣಿಸಿಕೊಂಡಿದೆ.

ಹೊಸ ಸೇತುವೆ ನಿರ್ಮಾಣವಾದ ನಂತರ ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ವಾಹನಗಳಿಗೆ ಈ ಸೇತುವೆಯಲ್ಲಿ ಮತ್ತು ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುವ ವಾಹನಗಳಿಗೆ ಹಳೇ ಸೇತುವೆಯಲ್ಲಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿತ್ತು.

ಇದನ್ನೂ ಓದಿ: ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ಹೊಸ ಸೇತುವೆಯಲ್ಲಿ ಬಿರುಕು ಕಂಡುಬಂದ ಹಿನ್ನಲೆಯಲ್ಲಿ ಈಗ ಹಳೆಯ ಸೇತುವೆ ಮೂಲಕ ಎರಡು ಕಡೆಗಳ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next