Advertisement

Bantwal ಪಾಣೆಮಂಗಳೂರು ಸೇತುವೆಯಲ್ಲಿ ಬಿರುಕು?

11:49 PM Oct 08, 2023 | Team Udayavani |

ಬಂಟ್ವಾಳ:ಪಾಣೆ ಮಂಗಳೂರಿನ ನೇತ್ರಾವತಿ ಹಳೆಯ ಉಕ್ಕಿನ ಸೇತುವೆಯ ಮಧ್ಯೆ ರವಿವಾರ ಬಿರುಕು ಕಾಣಿಸಿಕೊಂಡಿದ್ದು, ಇದೀಗ ಸೇತುವೆಯ ಸಂಚಾರದ ಕುರಿತು ಆತಂಕ ವ್ಯಕ್ತವಾಗಿದೆ.

Advertisement

ಸೇತುವೆಯ ಮೇಲಿನ ರಸ್ತೆಯಲ್ಲಿ ಬಿರುಕು ಕಂಡುಬಂದಿದ್ದು, ಇದು ಸೇತುವೆಯ ಬಿರುಕೇ ಅಥವಾ ಮೇಲಿನ ರಸ್ತೆಯ ಭಾಗದಲ್ಲಿ ಮಾತ್ರ ಬಿರುಕು ಕಂಡುಬಂದಿದೆಯೇ ಎಂಬುದು ಖಚಿತಗೊಂಡಿಲ್ಲ. ಈ ಕುರಿತು ಸಂಬಂಧಪಟ್ಟ ತಜ್ಞರೇ ಪರಿಶೀಲನೆ ನಡೆಸಿ ವರದಿ ನೀಡಬೇಕಿದೆ.

ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಈ ಸೇತುವೆಯಲ್ಲಿ ಈ ಹಿಂದೆಯೇ ಬಿರುಕು ಕಾಣಿಸಿಕೊಂಡು ಬಳಿಕ ಘನ ವಾಹನಗಳ ಸಂಚಾರ ಅಪಾಯಕಾರಿ ಎಂಬ ವರದಿ ನೀಡಲಾಗಿತ್ತು. ಆದರೆ ಕಾಲಕ್ರಮೇಣ ಘನ ವಾಹನಗಳು ಕೂಡ ಸಂಚಾರ ನಡೆಸುತ್ತಿದ್ದವು.

ಗೊಂದಲ ನಿವಾರಿಸಬೇಕಿದೆ
ಇದೀಗ ಮತ್ತೆ ಸೇತುವೆಯಲ್ಲಿ ಬಿರುಕಿನ ಮಾದರಿ ಕಂಡುಬಂದಿ ರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ತಜ್ಞರು ಪರಿಶೀಲಿಸಿ ವರದಿ ನೀಡಿದ ಬಳಿಕ ಜನರ ಗೊಂದಲ ನಿವಾರಣೆಯಾಗಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next