Advertisement

Heavy Rain: ಜೋಡುಪಾಲ; ರಾಷ್ಡ್ರೀಯ ಹೆದ್ದಾರಿಯಲ್ಲಿ ಬಿರುಕು

12:04 PM Jul 16, 2024 | Team Udayavani |

ಅರಂತೋಡು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯ ಜೋಡುಪಾಲ ಸಮೀಪ ಮಂಗಳವಾರ(ಜು.16ರಂದು) ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಬದಿಯ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

Advertisement

ಕಳೆದ ಎರಡು ಮೂರು ದಿನಗಳಿಂದ ಕೊಡಗು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜೋಡುಪಾಲ ಸಮೀಪ  ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯ ಒಂದು ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚಿಸಲಾಗಿರುವುದಾಗಿ ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರ ಕೈಗೊಳ್ಳಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಸುಮಾರು 6 ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ಗುಡ್ಡ ಕುಸಿದು ಜಲಪ್ರಳಯ ಆಗಿ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.ಅಲ್ಲದೆ ಸಾವು ನೋವು ಸಂಭವಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next