Advertisement

ಜಾತ್ರೆಯಲ್ಲಿ ಮದ್ದು ಸಿಡಿದು 20ಕ್ಕೂ‌ ಅಧಿಕ ಮಂದಿಗೆ ಗಾಯ; ಬಾಲಕ ಸೇರಿ ನಾಲ್ವರ ಸ್ಥಿತಿ ಗಂಭೀರ

05:35 PM Oct 21, 2022 | Team Udayavani |

ಕಲಬುರಗಿ: ಜಾತ್ರೆ ನಡೆಯುತ್ತಿದ್ದ ವೇಳೆ ಸಿಡಿಮದ್ದು ಸ್ಪೋಟಗೊಂಡು 20 ಕ್ಕೂ ಅಧಿಕ ಜನರು ಗಂಭೀರ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ‌ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.

Advertisement

ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಮರಗಮ್ಮ‌ ದೇವಿ ಜಾತ್ರೆ ಹಾಗೂ ಈ ಹಿಂದೆ ಭಗ್ನವಾದ 15 ದೇವಿಗಳ‌ ಮೂರ್ತಿ ಮರು ಪ್ರತಿಷ್ಠಾಪನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯಲ್ಲಿ ಹಾರಿಸಲು ಮದ್ದು ಸಿಡಿಸಿ ಸಂಭ್ರಮಿಸಲಾಗುತಿತ್ತು. ಆಕಾಶದತ್ತ ಮದ್ದು ಸಿಡಿಸಿದಾಗ ಬೆಂಕಿಯ ಕಿಡಿ ಪಕ್ಕದಲ್ಲಿಯೇ ಸಂಗ್ರಹಿಸಿ ಹಾರಿಸಲು ಇಟ್ಟಿದ್ದ ಮದ್ದಿನ‌ ಮೇಲೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕೈಗಡಿಯಾರಗಳಿಂದ ಮಾಡಿದ ಮಿನಿ ಸ್ಕರ್ಟ್‌, ಕಲ್ಲುಗಳಿಂದ ಬಿಕಿನಿ ಟಾಪ್ – ಉರ್ಫಿ ಹೊಸ ಅವತಾರ

ಅಂದಾಜು ಐದು‌ ಕೆಜಿಯಷ್ಟಿದ್ದ ಮದ್ದು ಸಿಡಿದಾಗ ಹಲವರು ಗಾಯಗೊಂಡಿದ್ದಾರೆ. ಮದ್ದು ಸಿಡಿಸುವ ವ್ಯಕ್ತಿ, ಓರ್ವ ಮಗು ಸೇರಿ‌ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನ ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ‌ ದಾಖಲಿಸಲಾಗಿದೆ. ಘಟನೆಯಲ್ಲಿ ಹಲವರ ದೇಹದ ಅಂಗಾಂಗಗಳು ಸುಟ್ಟಿದ್ದು ಗ್ರಾಮಸ್ಥರು ಕಾರುಗಳ ಮುಖಾಂತರ ಅವರನ್ನು ಸ್ಥಳೀಯ ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next