Advertisement

ನೆರೆ ನಿರ್ವಹಣೆಗೆ ಉನ್ನತ ಮಟ್ಟದ ಪ್ರಾಧಿಕಾರ ರಚಿಸಿ

11:49 PM Aug 14, 2019 | Team Udayavani |

ಹಾವೇರಿ: ನೆರೆ ಸಂತ್ರಸ್ತರಿಗೆ ಪುನರ್‌ ವಸತಿ ಹಾಗೂ ಗ್ರಾಮಗಳ ಪುನರ್‌ ನಿರ್ಮಾಣ ಮಾಡಲು ಸರ್ಕಾರ ಉನ್ನತ ಮಟ್ಟದ ಪ್ರಾಧಿಕಾರ ರಚಿಸಿ ಜವಾಬ್ದಾರಿ ವಹಿಸಬೇಕು ಎಂದು ಮಾಜಿ ಸಚಿವ ಎಚ್‌.ಕೆ. ಪಾಟೀಲ ಆಗ್ರಹಿಸಿದರು. ಬುಧವಾರ ಜಿಲ್ಲೆಯ ವಿವಿಧ ನೆರೆಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉಲ್ಬಣಿಸಿದ ನೆರೆ ಸಮಸ್ಯೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಬೇಕು.

Advertisement

ಈ ದಿಸೆಯಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಅದಕ್ಕೂ ಮೊದಲು ರಾಜ್ಯ ಸರ್ಕಾರ ಇದನ್ನು ರಾಜ್ಯ ವಿಪತ್ತು ಎಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು. ನೆರೆಯ ಕಾರಣದಿಂದ ಈ ಬಾರಿಯ ಶೈಕ್ಷಣಿಕ ವರ್ಷವನ್ನು ಸೆಪ್ಟೆಂಬರ್‌ನಿಂದ ಮೇ ವರೆಗೆ ಬದಲಾಯಿಸಬೇಕು. ನೆರೆ ಬಾಧಿತ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ಶುಲ್ಕ ತುಂಬಲು ಸಂಪೂರ್ಣ ವಿನಾಯಿತಿ ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next