Advertisement

ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಿ ಕಳುಹಿಸಿ

11:55 AM Apr 08, 2020 | Suhan S |

ಬೆಂಗಳೂರು:  ಕೋವಿಡ್ 19 ಹಿನ್ನೆಲೆಯಲ್ಲಿ ಮನೆಯಲ್ಲಿರುವ ಮಕ್ಕಳ ಕ್ರಿಯಾಶೀಲತೆಯನ್ನು ಹೆಚ್ಚಿಸುವುದಕ್ಕಾಗಿ ಶಿಕ್ಷಣ ಇಲಾಖೆಯು ಯುಟ್ಯೂಬ್‌ ಚಾನಲ್‌ ಆರಂಭಿಸುತ್ತಿದೆ. ಶಿಕ್ಷಕರು, ಸಾಫ್ಟ್‌ವೇರ್‌ ತಂತ್ರಜ್ಞರು ಹಾಗೂ ಸಾರ್ವಜನಿಕರು ಈ ಅಭಿಯಾನಕ್ಕೆ ಕೈಜೋಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಮನವಿ ಮಾಡಿದ್ದಾರೆ.

Advertisement

ಕೋವಿಡ್ 19 ಭೀತಿ ಮಕ್ಕಳ ಶೈಕ್ಷಣಿಕ ಸಿದ್ಧತೆ ಹಾಗೂ ಕಲಿಕಾ ಸಾಮರ್ಥ್ಯವನ್ನು ಕಸಿದು ಕೊಳ್ಳುತ್ತಿದೆ. ಮಕ್ಕಳಲ್ಲಿ ಹೊಸ ಚೈತನ್ಯ ತುಂಬು ವುದಕ್ಕಾಗಿ ಯುಟ್ಯೂಬ್‌ ಚಾನಲ್‌ ಆರಂ ಭಿಸುವ ಆಲೋಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಚಾನೆಲ್‌ ಮೂಲಕ ಪ್ರತಿ ದಿನ ಬೆಳಗ್ಗೆ ಒಂದು ಗಂಟೆ ಸಮಯ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಬಿತ್ತರಿಸುವ ಉದ್ದೇಶ ಹೊಂದಲಾಗಿದೆ. ಈ ಕಾರ್ಯಕ್ರಮಗಳು ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿರಬೇಕು ಮಕ್ಕಳೊಂದಿಗೆ ಪೋಷಕರನ್ನೂ ಪ್ರೇರೇಪಿಸಬೇಕು. ಅಂದಾಜು 10 ರಿಂದ 15 ನಿಮಿಷಗಳ 4ರಿಂದ5 ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಡಿಯೋ ಮಾಡುವವರು ಏನು ಮಾಡಬೇಕು?: ಮಕ್ಕಳಿಗೆ ಸೂಕ್ತ ಹಾಗೂ ಸಮಂಜಸವೆನಿಸುವ ಯಾವುದೇ ಸಾಮಗ್ರಿಯನ್ನು ಸಿದ್ಧಪಡಿಸಬಹುದು. ವಿಡಿಯೋ ಸಾಮಗ್ರಿ 10ರಿಂದ 15 ನಿಮಿಷಗಳ ಗರಿಷ್ಠ ಅವಧಿಯುಳ್ಳದ್ದಾಗಿರಬೇಕು. ವಿವರಿಸಲಾಗುವ ವಿಷಯಗಳು ಹೊಸದಾಗಿದ್ದು, ಮಕ್ಕಳಲ್ಲಿ ಆಸಕ್ತಿ, ಕುತೂಹಲ ಹುಟ್ಟಿಸುವಂತಿರಬೇಕು ಹಾಗೂ ಕೆಲವು ಚಟುವಟಿಕೆಗಳನ್ನೂ ಒಳಗೊಂಡಿರಬೇಕು. ಸಿದ್ಧಪಡಿಸುವ ಸಾಮಗ್ರಿಗಳು ಪಠ್ಯಕ್ರಮಕ್ಕೆ ಸಂಬಂಧಿಸಿರುವ ಅಗತ್ಯವಿಲ್ಲ. ಕಾರ್ಯಕ್ರಮಗಳು ಏಕಮುಖವಾಗಿರಬಾರದು. ಕಥಾವಾಚನ, ಪುಸ್ತಕ ಪರಿಚಯ ಓದು, ಪ್ರಯೋಗಗಳು/ ಚಟುವಟಿಕೆಗಳು/ಮ್ಯಾಜಿಕ್‌ ಇತ್ಯಾದಿಗಳ ವಿವರಣೆಯುಕ್ತ ಪ್ರದರ್ಶನ, ಗಾದೆಗಳು, ಒಗಟುಗಳನ್ನು ಬಿಡಿಸುವ ವಿಡಿಯೋ ಮಾಡಬಹುದು.

ಕಾರ್ಯಕ್ರಮ ಸಿದ್ಧಪಡಿಸುವವರು ವಿಡಿಯೋ ದಾಖಲೀಕರಣಕ್ಕೆ ಡಿಎಸ್‌ಇಆರ್‌ಟಿ ಸ್ಟುಡಿಯೋ ಉಪಯೋಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಕಾರ್ಯಕ್ರಮಗಳ ನಿರೂಪಣೆಗೆ ನಟ,ನಟಿ, ಟೀವಿ ನಿರೂಪಕರು, ರೇಡಿಯೋ ಜಾಕಿಗಳೂ ತೊಡಗಿಸಿಕೊಳ್ಳಬಹುದು. ಕಾರ್ಯಕ್ರಮವನ್ನು ಮುಂದಿನ 50 ದಿನಗಳವರೆಗೆ ಪ್ರಸಾರ ಮಾಡಲಾಗುತ್ತದೆ. ವಿಡಿಯೋ ಸಾಮಗ್ರಿಯನ್ನು ಇ-ಮೇಲ್‌ makkalavanissk@gmail.com ಅಥವಾ ಗೂಗಲ್‌ ಡ್ರೈವ್‌, ವಾಟ್ಸ್‌ ಆ್ಯಪ್‌, ಟೆಲಿಗ್ರಾಮ್‌ ಮೂಲಕ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ- 080-22483040 ಅಥವಾ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕ ಡಾ. ಎಂ.ಟಿ. ರೇಜು ಅವರನ್ನು ಸಂಪರ್ಕಿಸಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next