Advertisement

ಕುಕ್ಕೆಯಲ್ಲಿ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌ ಸರ್ಪಸಂಸ್ಕಾರ ಸೇವೆ

11:41 PM Jun 11, 2024 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌ ಸರ್ಪಸಂಸ್ಕಾರ ಸೇವೆಯನ್ನು ಮಂಗಳವಾರ ಆರಂಭಿಸಿದ್ದಾರೆ.

Advertisement

ಸೋಮವಾರ ರಾತ್ರಿ ಕ್ಷೇತ್ರಕ್ಕೆ ಪತ್ನಿ ಆಶಿತಾ ಸೂದ್‌ ಅವರೊಂದಿಗೆ ಆಗಮಿಸಿ ಖಾಸಾಗಿ ಹೊಟೇಲ್‌ನಲ್ಲಿ ತಂಗಿದ್ದರು. ಅವರನ್ನು ಹೊಟೇಲ್‌ನಲ್ಲಿ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಲಾಯಿತು.

ಬುಧವಾರ ಗೋಪೂಜೆ, ಬ್ರಹ್ಮಚಾರಿ ಆರಾಧನೆ ಮತ್ತು ನಾಗಪ್ರತಿಷ್ಠೆ ನೆರವೇರಿಸಿ ಸರ್ಪಸಂಸ್ಕಾರ ಸೇವೆಯನ್ನು ಸಮಾಪ್ತಿಗೊಳಿಸಲಿದ್ದಾರೆ.

ಕೊಲ್ಲೂರು, ಮಾರಣಕಟ್ಟೆ ದೇವಸ್ಥಾನಕ್ಕೆ ಭೇಟಿ
ಮಯಾಂಕ್‌ ಅಗರ್ವಾಲ್‌ ಅವರು ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next