Advertisement

Thirthahalli ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿ ಮಾಡಿದ ಸಿಬ್ಬಂದಿ

08:42 PM Jul 21, 2024 | Shreeram Nayak |

ತೀರ್ಥಹಳ್ಳಿ : ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರವ ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಲೈನ್ ಮ್ಯಾನ್ ಸಾಹಸ ಪಡುವ ವಿಡಿಯೋ ಆಗುಂಬೆ ಸಮೀಪ ಸೆರೆಯಾಗಿದೆ.

Advertisement

ಹೌದು ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ ವ್ಯಾಪ್ತಿಯಲ್ಲಿ ನೀರಿನ ಮಧ್ಯೆ ಇದ್ದ ವಿದ್ಯುತ್ ತಂತಿ ತುಂಡಾದ ಹಿನ್ನೆಲೆ ನೀರಿಗೆ ಇಳಿದ ಸಿಬ್ಬಂದಿ ನೀರಿಗೆ ಜಿಗಿದು ಸಂಪರ್ಕ ಸರಿಪಡಿಸಿದ್ದಾರೆ. ಕಲಬುರ್ಗಿ ಮೂಲದ ಸಂತೋಷ ಎಂಬ ವ್ಯಕ್ತಿ ತನ್ನ ಜೀವವನ್ನು ಲೆಕ್ಕಿಸದೆ ವಿದ್ಯುತ್ ಸಂಪರ್ಕ ಸರಿಪಡಿಸಿದ್ದಾರೆ.

ಆಗುಂಬೆ ಭಾಗಕ್ಕೆ ಕಮ್ಮರಡಿಯ ಸಬ್ ಡಿವಿಜನ್ ನಿಂದ ಈ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಂಪರ್ಕವು ಸರಿ ಮಾಡದೆ ಇದ್ದರೆ ಮೂರು ಪಂಚಾಯಿತಿ ವಿದ್ಯುತ್ ಸಂಪರ್ಕ ಇಲ್ಲದಂತಾಗುತ್ತಿತ್ತು. ಇದನ್ನ ಮನಗಂಡು ನೀರಿಗೆ ಧುಮುಕಿ ಸಂತೋಷ್ ದುರಸ್ತಿ ಮಾಡಿದ್ದಾರೆ.ಇವರ ಈ ಸಾಹಸಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next