Advertisement

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ಮನೀಶ್ ಪಾಂಡೆ ದಂಪತಿ

11:04 AM Mar 08, 2020 | keerthan |

ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಖ್ಯಾತ ಮನೀಶ್ ಪಾಂಡೆ ದಂಪತಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

Advertisement

ಮನೀಷ್ ಪಾಂಡೆ ತನ್ನ ಪತ್ನಿ ಆಶ್ರಿತಾ ಶೆಟ್ಟಿ ಜೊತೆಗೂಡಿ ನಾಗರಾಧನಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಆಗಮಿಸಿದ್ದು, ಪೂಜೆ ಸಲ್ಲಿಸಿ ಶ್ರೀ ದೇವರ ಆಶೀರ್ವಾದ ಪಡೆದರು.

ಶುಕ್ರವಾರ ರಾತ್ರಿಯೇ ಕುಕ್ಕೆಗೆ ಆಗಮಿಸಿದ್ದ ದಂಪತಿ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ಇಂದು ದೇವಸ್ಥಾನಕ್ಕಾಗಮಿಸಿ ಆಶ್ಲೇಷ ಪೂಜೆ ಸಲ್ಲಿಸಿದರು. ಸ್ನೇಹಿತರು ಪಾಂಡೆ ದಂಪತಿಗೆ ಸಾಥ್ ನೀಡಿದರು.

ಇತ್ತೀಚೆಗಷ್ಟೇ ನಡೆದ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ಭಾರತ ತಂಡದ ಪರ ಟಿ20 ಮತ್ತು ಏಕದಿನ ತಂಡದಲ್ಲಿ ಮನೀಶ್ ಪಾಂಡೆ ಆಡಿದ್ದರು. ನಂತರ ಕರ್ನಾಟಕದ ಪರ ರಣಜಿ ಕ್ವಾರ್ಟರ್ ಫೈನಲ್ ಮತ್ತು ಸೆಮಿ ಫೈನಲ್ ಆಡಿದ್ದರು. ಮನೀಶ್  ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ.

ಮನೀಶ್ ಪಾಂಡೆ ಅವರು ಕಳೆದ ವರ್ಷ ಡಿಸೆಂಬರ್ 2ರಂದು ಮಂಗಳೂರು ಮೂಲದ, ಸದ್ಯ ಮುಂಬೈನಲ್ಲಿ ನೆಲೆಸಿರುವ ನಟಿ ಆಶ್ರಿತಾ ಶೆಟ್ಟಿಯವರನ್ನು ವಿವಾಹವಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next