Advertisement

ಚಿತ್ರ ನಿರ್ಮಾಣಕ್ಕೆ ಕಾಲಿಟ್ಟ ಧೋನಿ

07:52 AM May 13, 2022 | Team Udayavani |

ಚೆನ್ನೈ: ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ, ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಸದ್ಯದಲ್ಲೇ ತಾವೊಂದು ತಮಿಳು ಚಿತ್ರವನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

Advertisement

ಸೂಪರ್‌ಸ್ಟಾರ್‌ ರಜನೀಕಾಂತ್‌ರವರ ಆಪ್ತರಾದ ಸಂಜಯ್‌ ಎಂಬುವರನ್ನು ಚಿತ್ರದ ನಾಯಕನನ್ನಾಗಿ ಆರಿಸಲಾಗಿದ್ದು, ಖ್ಯಾತ ನಟಿ ನಯನತಾರಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಬಾರಿಯ ಐಪಿಎಲ್‌ ಮುಗಿದ ಕೂಡಲೇ ಚಿತ್ರದ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ ಎಂದು ಧೋನಿ ತಿಳಿಸಿದ್ದಾರೆ.

ಈ ತಿಂಗಳ ಅಂತ್ಯಕ್ಕೆ ಐಪಿಎಲ್‌ ಪಂದ್ಯಾವಳಿ ಮುಗಿಯಲಿದ್ದು, ಅದರ ಬೆನ್ನಲ್ಲೇ ಚಿತ್ರದ ಶೂಟಿಂಗ್‌ ಶುರುವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next