Advertisement

ಪೊಲೀಸರೆಡೆಗೆ ಮಚ್ಚು ಬೀಸಿ ಕೊಲೆ ಆರೋಪಿಯ ಎಸ್ಕೇಪ್ ಯತ್ನ: ಪೊಲೀಸರಿಂದ ಗುಂಡಿನ ದಾಳಿ

12:06 PM Jul 16, 2022 | Team Udayavani |

ಕಲಬುರಗಿ: ಶಹಬಾದ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿಜಯನನ್ನು ಸ್ಥಳ ಮಹಜರು ಮಾಡಲು ಹೋದಾಗ ಆತ ಪರಾರಿಯಾಗಲು ಯತ್ನಿಸಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಫೈರಿಂಗ್ ಮಾಡಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಈ ವೇಳೆ ಆರೋಪಿಯ ಕಾಲು ಮತ್ತು ತಲೆಗೆ ಗಾಯವಾಗಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಶಹಬಾದ್ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ‌ ಪಿಎಸ್ಐ ಸುವರ್ಣಾ ಮಲಶೆಟ್ಟಿ ಅವರಿಗೆ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ವಿವರ: ಜುಲೈ 11ರಂದು ಶಹಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆಯಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ವಿಜಯನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದರು. ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಬಿಸಾಡಿದ್ದ ಸ್ಥಳದ ಮಹಜರು ನಡೆಸಲು ಶನಿವಾರ ಬೆಳಗ್ಗೆ ಕರೆದೊಯ್ಯಲಾಗಿತ್ತು.

ಇದನ್ನೂ ಓದಿ:ಸರ್ಕಾರಿ ನೌಕರ 2ನೇ ವಿವಾಹವಾಗಲು ಅನುಮತಿ ಕಡ್ಡಾಯ: ಬಿಹಾರ ಸರ್ಕಾರದ ಅಧಿಸೂಚನೆಯಲ್ಲೇನಿದೆ?

ತನಿಖಾಧಿಕಾರಿ ಪ್ರಕಾಶ ಯಾತನೂರ ಮತ್ತು ಪಿಎಸ್ಐ ಸುವರ್ಣಾ ಅವರಿಗೆ ತಾನು ಬಿಸಾಡಿದ ಮಚ್ಚು ತೋರಿಸಿದ ಆರೋಪಿ, ಅದೇ ಮಚ್ಚಿನಿಂದ ಪಿಎಸ್ಐ ಸುವರ್ಣಾ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತನಿಖಾಧಿಕಾರಿ ಚಿತ್ತಾಪುರ ಸಿಪಿಐ ಪ್ರಕಾಶ ಯಾತನೂರ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಹೇಳಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಈ ವೇಳೆ ಆರೋಪಿಯ ಬಲಗಾಲಿಗೆ ಒಂದು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

Advertisement

ಆರೋಪಿ ವಿಜಯ ಮತ್ತುಗಾಯಾಳು ಪಿಎಸ್ ಐ ಸುವರ್ಣ

ಆರೋಪಿ ವಿಜಯನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next