Advertisement

ಮಂಜೇಶ್ವರ ಚುನಾವಣೆ ಲಂಚ ಪ್ರಕರಣ: ಕೆ. ಸುರೇಂದ್ರನ್‌ ಒಂದನೇ ಆರೋಪಿಯಾಗಿಸಿ ಆರೋಪ ಪಟ್ಟಿ ಸಲ್ಲಿಕೆ

05:08 PM Jan 12, 2023 | Team Udayavani |

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣೆ ಲಂಚ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಒಂದನೇ ಆರೋಪಿಯಾಗಿಸಿ ಜಿಲ್ಲಾ ಕ್ರೈಂಬ್ರಾಂಚ್‌ ಕಾಸರಗೋಡು ಜಿಲ್ಲಾ ಸೆಶನ್ಸ್‌ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ.

Advertisement

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರ ಅವರನ್ನು ಅಪಹರಿಸಿ ಬೆದರಿಕೆಯೊಡ್ಡಿದ ಬಳಿಕ 2.5 ಲಕ್ಷ ರೂ. ಹಾಗು ಮೊಬೈಲ್‌ ಫೋನ್‌ ನೀಡಿ ನಾಮಪತ್ರ ಹಿಂತೆಗೆಯುವಂತೆ ಮಾಡಿರುವುದಾಗಿ ಆರೋಪಿಸಲಾಗಿತ್ತು.

ಸುರೇಂದ್ರನ್‌, ಯುವಮೋರ್ಚಾ ಮಾಜಿ ರಾಜ್ಯ ಕೋಶಾಧಿಕಾರಿ ಸುನಿಲ್‌ ನಾಯ್ಕ, ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ.ಬಾಲಕೃಷ್ಣ ಶೆಟ್ಟಿ, ಪ್ರಾದೇಶಿಕ ನೇತಾರರಾದ ಸುರೇಶ್‌ ನಾಯ್ಕ, ಕೆ.ಮಣಿಕಂಠ ರೈ, ಲೋಕೇಶ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next