Advertisement

ಸಂತೆಕಟ್ಟೆ: ನಡುರಸ್ತೆಯಲ್ಲೇ ಯುವತಿಗೆ ಚೂರಿಯಿಂದ ಇರಿದು, ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ

06:23 PM Aug 30, 2021 | Team Udayavani |

ಉಡುಪಿ: ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

Advertisement

ಬೈಕಿನಲ್ಲಿ ಬಂದಿದ್ದ ಯುವಕ ಸ್ಕೂಟಿಯಲ್ಲಿ ಬಂದಿದ್ದ ಯುವತಿ ಜೊತೆ ಮಾತನಾಡುತ್ತಲೇ ಚೂರಿಯಿಂದ ಇರಿದಿದ್ದಾನೆ, ಬಳಿಕ ತಾನು ಚೂರಿಯಿಂದ ಇರಿದುಕೊಂಡಿದ್ದಾನೆ .

ಘಟನಾ ಸ್ಥಳದಲ್ಲಿ ಚೂರಿ ಪತ್ತೆಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಸ್ತೆ ಬದಿ️ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರೂ ಅಂಬಾಗಿಲಿನವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ :Breaking news|6 ರಿಂದ 8 ನೇ ತರಗತಿ ಆರಂಭಕ್ಕೆ ಸಮ್ಮತಿ|‘ಸೆಪ್ಟೆಂಬರ್ 6’ ರಿಂದ ಶಾಲೆ ಶುರು  

Advertisement
Advertisement

Udayavani is now on Telegram. Click here to join our channel and stay updated with the latest news.

Next