Advertisement

ಪತ್ನಿ ಕೊಲೆಗೈದು, ಆತ್ಮಹತ್ಯೆಗೆ ಶರಣಾದ ಪತಿ

11:52 AM Oct 18, 2021 | Team Udayavani |

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಪತಿಯೇ ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ತಿಗಳರಪಾಳ್ಯ ನಿವಾಸಿ ಮಂಜುನಾಥ್‌ (32) ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು ಪತ್ನಿರೋಜಾ (28)ರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.

Advertisement

ಕನಕಪುರ ತಾಲೂಕಿನ ಸಾತನೂರು ಕುಂಚಿಟಿಗರ ಪಾಳ್ಯ ಮೂಲದ ಮಂಜುನಾಥ್‌ ನಗರದಲ್ಲಿ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡು ತ್ತಿದ್ದು, ನಾಲ್ಕು ವರ್ಷಗಳ ಹಿಂದೆ ರೋಜಾ ಅವರನ್ನು ಮದುವೆಯಾಗಿದ್ದ. ದಂಪತಿಗೆ ಮಕ್ಕಳು ಇರಲಿಲ್ಲ. ಈ ಮೊದಲು ಅಂದ್ರಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಈ ಮಧ್ಯೆ ಮಂಜುನಾಥ್‌ ಕುಡಿದು ಬಂದು ಪತ್ನಿಗೆ ನಿಂದಿಸಿ, ಹಲ್ಲೆ ನಡೆಸುತ್ತಿದ್ದ. ಕೆಲ ತಿಂಗಳ ಹಿಂದೆ ಬ್ಯಾಡರಹಳ್ಳಿಯ ತಿಗಳರ ಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿಯೂ ಸಹ ಮಂಜುನಾಥ್‌, ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ;- ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್‌

 ದಂಪತಿ ನಡುವೆ ಗಲಾಟೆ, ಕೊಲೆ: ಭಾನುವಾರ ಸಂಜೆ ದಂಪತಿ ನಡುವೆ ಗಲಾಟೆಯಾಗಿದ್ದು, ಈ ವೇಳೆ ಕೋಪಗೊಂಡ ಮಂಜುನಾಥ್‌ ಪತ್ನಿ ಯನ್ನು ಚಾಕುವಿನಿಂದ ಕೊಲೆಗೈದು, ಬಳಿಕ ತಾನೂ ಅದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ 7 ಗಂಟೆ ಸುಮಾರಿಗೆ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋದಾಗ ಒಳಭಾಗದಿಂದ ಮನೆ ಲಾಕ್‌ ಮಾಡಲಾಗಿತ್ತು. ಬಳಿಕ ಸ್ಥಳೀಯರ ನೆರವಿನೊಂದಿಗೆ ಬಾಗಿಲುಮುರಿದು ಒಳ ಹೋದಾಗ, ರಕ್ತದ ಮಡುವಿನಲ್ಲಿ ರೋಜಾ ಮೃತದೇಹ ಬಿದ್ದಿತ್ತು.

Advertisement

ಅಲ್ಲದೆ, ಕಬೋರ್ಡ್‌ ಮೇಲ್ಭಾಗದಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಅದೇ ಕೊಠಡಿಯಲ್ಲಿ ಮಂಜುನಾಥ್‌ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ ಪತಿ ಮಂಜುನಾಥ್‌, ಮೊದಲಿಗೆ ಪತ್ನಿ ರೋಜಾಳನ್ನು ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಮಕ್ಕಳಿರದ ಕಾರಣಕ್ಕೆ ಕೊಲೆ?

ಮದುವೆಯಾಗಿ ನಾಲ್ಕು ವರ್ಷಗಳು ಕಳೆದರೂ ದಂಪತಿಗೆ ಮಕ್ಕಳು ಇರಲಿಲ್ಲ. ಅದೇ ವಿಚಾರಕ್ಕೆ ಮಂಜುನಾಥ್‌ ರೋಜಾಗೆ ನಿಂದಿಸಿ, ಹಲ್ಲೆ ನಡೆಸುತ್ತಿದ್ದ. ಭಾನುವಾರ ಅದೇ ವಿಚಾರ ತಾರಕಕ್ಕೇರಿದ್ದು, ಮಂಜುನಾಥ್‌ ಕೋಪಗೊಂಡು ಕೊಲೆಗೈದಿದ್ದಾನೆ ಎಂದು ಹೇಳಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next