Advertisement

ಗೋದಾಮು ಕಟ್ಟಡಕ್ಕೆ ಬೆಂಕಿ: ವೃದ್ಧ ಕೃಷಿಕ ಸಜೀವ ದಹನ

01:30 AM Jun 07, 2022 | Team Udayavani |

ಗುತ್ತಿಗಾರು: ಗೋದಾಮು ಇದ್ದ ಕಟ್ಟಡಕ್ಕೆ ಬೆಂಕಿ ತಗಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್‌ ಮೃತರು. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಅವರು ಮೃತಪಟ್ಟಿದ್ದು, ದೇಹ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಸೋಮವಾರ ಮುಂಜಾನೆ ಕರ ಟಿದ ವಾಸನೆ ಬರುತ್ತಿದ್ದ ಹಿನ್ನೆಲೆ ಯಲ್ಲಿ ಮನೆಯವರು ಹೋಗಿ ನೋಡಿದಾಗ ಗೋದಾಮು ಬೆಂಕಿ ಹತ್ತಿಕೊಂಡು ಉರಿಯುತ್ತಿತ್ತು. ಒಳಗೆ ಮಹಾಲಿಂಗೇಶ್ವರ ಭಟ್‌ ಅವರ ಮೃತದೇಹ ಇತ್ತು.

ಅನಂತರ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದರು. ಸುಳ್ಯ ಪೋಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗೋದಾಮು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಗೋದಾಮಿನಲ್ಲಿದ್ದ ಕೃಷಿ ಉತ್ಪನ್ನಗಳು ಭಸ್ಮವಾಗಿವೆ. ಯಾವ ಕಾರಣಕ್ಕೆ ಬೆಂಕಿ ತಗಲಿದೆ ಎನ್ನುವುದು ತಿಳಿದುಬಂದಿಲ್ಲ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next