Advertisement

ಉಳ್ಳಾಲ: ಹತ್ತಿ ದಾಸ್ತಾನು ಗೋದಾಮಿಗೆ ಆಕಸ್ಮಿಕ ಬೆಂಕಿ : 8 ಲಕ್ಷಕ್ಕೂ ಹೆಚ್ಚು ನಷ್ಟ

09:02 PM Jun 21, 2022 | Team Udayavani |

ಉಳ್ಳಾಲ: ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‌ನಲ್ಲಿರುವ ಗ್ರಾಮ ಪಂಚಾಯತ್‌ ಕಚೇರಿ ಬಳಿಯ ಹತ್ತಿ ದಾಸ್ತಾನು ಗೋದಾಮು ಮತ್ತು ಹತ್ತಿಯಿಂದ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿದ್ದು, ಸುಮಾರು 8 ಲಕ್ಷಕ್ಕೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.

Advertisement

ಉಳ್ಳಾಲದ ಉದ್ಯಮಿ ನೌಮಾನ್‌ ಮಾಲೀಕತ್ವದ ಕೋಡಿ ಎಂಟರ್‌ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು , ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ.

ಮಂಗಳೂರಿನ ಪಾಂಡೇಶ್ವರದಿಂದ ಅಗ್ನಿಶಾಮಕದಳ ಆಗಮಿಸಿದಾಗ ಗೋದಾಮು ಸಹಿತ ಯಂತ್ರಗಳು ಭಾಗಶ: ಸುಟ್ಟು ಹೋಗಿತ್ತು. ಸ್ಥಳಕ್ಕೆ ಕೊಣಾಜೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next