Advertisement

ಭೋವಿ ಶ್ರೀ, ಅರವಿಂದ ಲಿಂಬಾವಳಿ,ಗೂಳಿಹಟ್ಟಿ, ಚಂದ್ರಪ್ಪ ಹತ್ಯೆಗೆ ಸಂಚು

09:42 PM Jul 15, 2022 | Team Udayavani |

ಚಿತ್ರದುರ್ಗ: ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಭೋವಿ ಸಮುದಾಯದ ಶಾಸಕರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬರ್ಥದ ಸಂದೇಶ ಪೊಲೀಸರಿಗೆ ತಲುಪಿದ್ದು, ಈ ಬಗ್ಗೆ ಹೊಳಲ್ಕೆರೆ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಡಿ.ಶೇಖರ್‌ ಹಾಗೂ ಎಂ.ಚಂದ್ರಪ್ಪ ಸೇರಿ ಹಲವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಬೆದರಿಕೆ ಸಂದೇಶ ಕರ್ನಾಟಕ ರಾಜ್ಯ ಪೊಲೀಸ್‌ (ಕೆಎಸ್‌ಪಿ) ಆ್ಯಪ್‌ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದೆ. ಭೋವಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಹಾಗೂ ಅವರ ಕುಟುಂಬ ಅಪಾಯದಲ್ಲಿದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಅನ್ಯ ಜಾತಿಗೆ ಸೇರಿದ ಕೆಲವರು ಭೋವಿ ವಡ್ಡರ ಸಂಘದ ಹೆಸರಿನಲ್ಲಿ ಸಮುದಾಯದ ನಾಯಕರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಬೆಂಬಲಿಸದಂತೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ.

ಸ್ವಾಮೀಜಿ ಹಾಗೂ ಇನ್ನೂ ಕೆಲವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖೀಸಲಾಗಿದೆ. ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರಿಗೆ ಭದ್ರತೆ ನೀಡುವಂತೆ ಕೋರಿ ಭೋವಿ ಗುರುಪೀಠ ಪೊಲೀಸರಿಗೆ ಮನವಿ ಮಾಡಿದೆ. ಮಠದ ಆಸ್ತಿ ಹಾಗೂ ಸ್ವಾಮೀಜಿಗೆ ದುಷ್ಕರ್ಮಿಗಳಿಂದ ಅಪಾಯ ಎದುರಾಗುವ ಸಾಧ್ಯತೆ ಇದ್ದು, ಸೂಕ್ತ ರಕ್ಷಣೆ ನೀಡುವಂತೆ ಮಠದ ಸಿಇಒ ಗೌನಹಳ್ಳಿ ಗೋವಿಂದಪ್ಪ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next