Advertisement

ಬೆಳ್ತಂಗಡಿ: ಯುವಕರ ಗುಂಪಿನಿಂದ ಹಲ್ಲೆ, ಜಗಳ ಬಿಡಿಸಲು ಬಂದ ವ್ಯಕ್ತಿ ಸಾವು

07:04 AM Jul 23, 2022 | Team Udayavani |

ಬೆಳ್ತಂಗಡಿ: ಆರು ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು ಈವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೆ ಹಲ್ಲೆ ನಡೆದಿದ್ದು ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಜ.22 ರಂದು ರಾತ್ರಿ ನಡೆದಿದೆ.

Advertisement

ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಮೃತಪಟ್ಟವರು.

ಆರೋಪಿತ ನಾರಾಯಣ ನಾಯ್ಕ್ (47) ಎಂಬವರು ಸ್ಥಳೀಯ ಆರು ವರ್ಷದ ಬಾಲಕಿಗೆ ಕಳೆದ 10 ದಿನಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ.

ಈ ವಿಚಾರವಾಗಿ ಅದಾಗಲೆ ರಾಜಿ ಸಂದಾನ ನಡೆದಿತ್ತು. ಆದರೆ ಇಂದು ಸಂಜೆ ವೇಳೆ ಮತ್ತೆ ಬಾಲಕಿಯನ್ನು ಕರೆದು ಮಾತಾಡಿಸಿದ್ದನ್ನು ಯಾರೋ ನೋಡಿದ ಹಿನ್ನೆಲೆ ನಾರಾಯಾಣ ನಾಯ್ಕ್ ಅವರನ್ನು ಯುವಕರ ತಂಡ ತಡೆದು ಹಲ್ಲೆಗೆ ಮುಂದಾಗಿದೆ. ಇದನ್ನು ನೋಡಿದ ಜಾರಪ್ಪ ನಾಯ್ಕ್ ಹಲ್ಲೆ ತಪ್ಪಿಸಲು ಬಂದಾಗ ಅವರನ್ನು ಯುವಕರು ತಳ್ಳಿದ್ದಾರೆ. ಕೆಳಗೆ ಬಿದ್ದ ಜಾರಪ್ಪ ನಾಯ್ಕ್ ಮತ್ತು ಗಂಭೀರ ಹಲ್ಲೆ ಗೊಳಗಾದ ನಾರಾಯಣ ನಾಯ್ಕ್ ಅವರನ್ನು ಜಾರಪ್ಪ ಅವರ ಮಗ ರಾಜಶೇಖರ್ ಬಂದು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಈ ವೇಳೆ ಜಾರಪ್ಪ ನಾಯ್ಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಂತರ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು ನಾರಾಯಣ ನಾಯ್ಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Advertisement

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಜಾರಪ್ಪ ನಾಯ್ಕ್ ಅವರ ಪುತ್ರ ರಾಜಶೇಖರ್ ದೂರು ನೀಡಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next