Advertisement

ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ: ನ್ಯಾಯಾಂಗ ಬಂಧನ

12:52 AM Jul 23, 2022 | Team Udayavani |

ಬಜಪೆ: ಮೊಗರು ಗ್ರಾಮದ ಕುಕ್ಕಟ್ಟೆಯಲ್ಲಿ ಅಜರುದ್ದೀನ್‌, ಹಸನಬ್ಬ ಯಾನೆ ನೌಶದ್‌ ಅವರು ಜತೆ ಸೇರಿ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನು ಎಳೆದು ಮಾನಭಂಗವನ್ನುಂಟು ಮಾಡಿದ್ದಲ್ಲದೇ ಕೋರ್ಟಿನಿಂದ ಆರೋಪಿಗಳ ಮೇಲಿರುವ ಕೇಸ್‌ ಅನ್ನು ಹಿಂದಕ್ಕೆ ತೆಗೆಯದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ಬೈದಿರುವ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿಗಳ ಪೈಕಿ ಮಂಗಳೂರು ತಾಲೂಕಿನ ಮೊಗರು ಗ್ರಾಮದ ನಿವಾಸಿ ಹಸನಬ್ಬ ಯಾನೆ ನೌಶದ್‌ (30) ವಿಚಾರಣೆಯ ಸಮಯ ನ್ಯಾಯಾಲಯದ ಮುಂದೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಬಜಪೆ ಇನ್‌ಸ್ಪೆಕ್ಟರ್‌ ಪ್ರಕಾಶ್‌ ಅವರ ತಂಡವು ವಿಳಾಸ ಬದಲಿಸಿ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸ ಮಾಡಿಕೊಂಡಿದ್ದ ಆರೋಪಿ ಹಸನಬ್ಬ ಯಾನೆ ನೌಶದ್‌ನನ್ನು ಜು. 21ರಂದು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next