Advertisement

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

12:11 AM Aug 09, 2022 | Team Udayavani |

ವಿಟ್ಲ: ಅನಂತಾಡಿ ಗ್ರಾಮದ ಬಂಟ್ರಿಂಜದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಹಗ್ಗ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.

Advertisement

ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ, ಅನಂತಾಡಿ ಗ್ರಾಮದ ಬಂಟ್ರಿಂಜ ಶೇಖರ ಮತ್ತು ಚಂದ್ರಾವತಿ ದಂಪತಿಯ ಪುತ್ರಿ ಲಿಖಿತಾ (11)ಮೃತರು.

ತಾಯಿ ಚಂದ್ರಾವತಿ ದಿನಸಿ ಸಾಮಗ್ರಿ ತರಲೆಂದು ಹತ್ತಿರದ ಅಂಗಡಿಗೆ ತೆರಳಿದ್ದಾಗ ಲಿಖಿತಾ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದು, ಜೋಕಾಲಿಗೆ ಕಟ್ಟಿದ ಹಗ್ಗ ಆಕೆಯ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾಳೆ.

ಮೃತ ಬಾಲಕಿ ತಂದೆ-ತಾಯಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಪರಿಶೀಲಿಸುತ್ತಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next