Advertisement

ಬೆಳ್ತಂಗಡಿ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಸಾವು

12:30 AM Aug 10, 2022 | Team Udayavani |

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್‌ ಬಳಿಯ ನಿವಾಸಿ ಸಚಿನ್‌ (17) ಆ. 9ರಂದು ಹೃದಯಾಘಾತದಿಂದಿಂ ಸಾವನ್ನಪ್ಪಿದರು.

Advertisement

ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಆ. 9ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು.

ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಅವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next