Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

12:40 AM Aug 14, 2022 | Team Udayavani |

ಪುತ್ತೂರು: ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರಿಂದ ನಗದು ದೋಚಿದ ಪ್ರಕರಣದದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬನ್ನೂರಿನಲ್ಲಿ ಬಂಧಿಸಿದ್ದಾರೆ.

Advertisement

ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ಶರತ್‌ ಬಂಧಿತ ಆರೋಪಿ. ಶರತ್‌ 2016ರಲ್ಲಿ ಪುತ್ತೂರು ಪರಿಸರದಲ್ಲಿ ವ್ಯಕ್ತಿಯೊಬ್ಬರ ನಗದು ದೋಚಿದ ಪ್ರಕರಣದಲ್ಲಿ ಬಂಧಿತ. ಬಳಿಕದ ಬೆಳವಣಿಗೆಯಲ್ಲಿ ಜಾಮೀನು ಪಡೆದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ನ್ಯಾಯಾಲಯ ಆರೋಪಿ ಶರತ್‌ ಬಂಧನಕ್ಕೆ ವಾರಂಟ್‌ ಜಾರಿ ಮಾಡಿತ್ತು.

ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಸುನಿಲ್‌ ಕುಮಾರ್‌ ಅವರ ಮಾರ್ಗದರ್ಶನದಂತೆ ಎ.ಎಸ್‌.ಐ. ಚಂದ್ರ, ಹೆಡ್‌ ಕಾನ್‌ಸ್ಟೆಬಲ್‌ ಪರಮೇಶ್ವರ ಮತ್ತು ಜಗದೀಶ್‌ ಅವರು ಆರೋಪಿಯನ್ನು ಬನ್ನೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ¨ªಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next