Advertisement

ಧ್ವಜ ಹಾರಿಸುವ ವೇಳೆ ಘಟನೆ: ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸುಳ್ಯದ ಯುವಕ ಸಾವು

10:26 PM Aug 15, 2022 | Team Udayavani |

ಸುಳ್ಯ: ಹರ್‌ಘರ್‌ ತಿರಂಗಾ ಅಭಿಯಾನದ ಪ್ರಯುಕ್ತ ತಾವು ವಾಸಿಸುತ್ತಿದ್ದ ಕಟ್ಟಡದ 2ನೇ ಮಹಡಿಯ ಟೆರೇಸ್‌‍ನಲ್ಲಿ ರಾಷ್ಟ್ರಧ್ವಜ ಹಾರಿಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸುಳ್ಯ ಮೂಲದ ಸಾಫ್ಟ್‌ ವೇರ್‌ ಎಂಜಿನಿಯರ್‌ ಮೃತಪಟ್ಟ ಘಟನೆ ಬೆಂಗಳೂರಿನ ಹೆಣ್ಣೂರಿನಲ್ಲಿ ರವಿವಾರ ಸಂಭವಿಸಿದೆ.

Advertisement

ಮೂಲತಃ ದ.ಕ. ಜಿಲ್ಲೆಯ ಸುಳ್ಯದ ಬೂಡು ಭಗವತಿ ದೇವಸ್ಥಾನ ಬಳಿಯ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಇದ್ದು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ (ಮೂಲತಃ ವಿಟ್ಲ ಸಮೀಪದ ಎತ್ತುಕಲ್ಲು ಪುರೋಹಿತ ಮನೆತನದವರು) ನಾರಾಯಣ ಭಟ್‌ ಅವರ ಪುತ್ರ ವಿಶ್ವೇಶ ಕುಮಾರ್‌ (33) ಮೃತರು. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಹೆಣ್ಣೂರು ಎಚ್‌‍ಬಿಆರ್‌ಲೇಔಟ್‌ 5ನೇ ಬ್ಲಾಕ್‌‍ನಲ್ಲಿ ತಮ್ಮ ಕಟ್ಟಡದ ಟೆರೇಸ್‌‍ಗೆ ರಾಷ್ಟ್ರಧ್ವಜ ಹಾರಿಸುವ ಸಲುವಾಗಿ ಹೋಗಿದ್ದರು.

ಎರಡು ಮಹಡಿಯ ಕಟ್ಟಡದ ನೆಲಮಹಡಿಯಲ್ಲಿ ಅವರು ಪತ್ನಿ ಹಾಗೂ ಎರಡು ವರ್ಷದ ಮಗಳು ಮತ್ತು ಪೋಷಕರ ಜತೆ ವಾಸವಿದ್ದರು. ಸುಳ್ಯದಲ್ಲಿದ್ದ ನಾರಾಯಣ ಭಟ್‌ ಕುಟುಂಬ ಮಗನಿಗೆ ಉದ್ಯೋಗ ಸಿಕ್ಕಿ, ಮದುವೆಯಾದ ಬಳಿಕ ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next