Advertisement

ನಾರಾವಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವತಿ ಸಾವು

12:53 AM Oct 09, 2022 | Team Udayavani |

ವೇಣೂರು: ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ, ನಾರಾವಿ ಗ್ರಾ.ಪಂ. ಸದಸ್ಯ ರಾಜವರ್ಮ ಜೈನ್‌ ಅವರ ಪುತ್ರಿ ಸುರಕ್ಷಾ ಜೈನ್‌ (23) ಅವರು ಮನೆ ಸಮೀಪದ ಕೆರೆಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ.

Advertisement

ಮನೆ ಸಮೀಪದ ದೊಡ್ಡಪ್ಪನ ಮನೆಗೆ ತೆರಳಿ ವಾಪಸಾಗುತ್ತಿದ್ದ ಸುರಕ್ಷಾ ಅವರು ಕೆರೆ ಬದಿಯ ಕಾಲು ದಾರಿ ಯಲ್ಲಿ ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದರು. ಸಹೋದರ ತತ್‌ಕ್ಷಣ ಕೆರೆಗೆ ಹಾರಿದ್ದರೂ ರಕ್ಷಿಸಲು ಸಾಧ್ಯವಾಗಿಲ್ಲ.

ಈ ವೇಳೆ ಘಟನೆಯಿಂದ ಆಘಾತ ಗೊಂಡ ತಂದೆ ರಾಜವರ್ಮ ಜೈನ್‌ ಕುಸಿದು ಬಿದ್ದು ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಪದವಿ ಶಿಕ್ಷಣ ಮುಗಿಸಿದ್ದ ಸುರಕ್ಷಾ ಜೈನ್‌ ಮನೆಯಲ್ಲೇ ಇದ್ದರು ಎನ್ನಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next