Advertisement

ಬೆಳ್ತಂಗಡಿ: ಅಪಘಾತವಾಗಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿ ಸಾವು

12:41 AM Oct 26, 2022 | Team Udayavani |

ಬೆಳ್ತಂಗಡಿ: ಪತ್ನಿ ಮತ್ತು ತನ್ನಿಬ್ಬರು ಮಕ್ಕಳ ಸಹಿತ ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದ ವೇಳೆ ಜೂ. 4ರಂದು ರಸ್ತೆ ದಾಟುವ ವೇಳೆಯಲ್ಲಿ ಬೈಕ್‌ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಉಜಿರೆ ಮಾಚಾರು ನಿವಾಸಿ ಯುವಕ ಅಶ್ರಫ್‌ ಅವರು ಅ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಮಾಚಾರು ಕುದುರು ನಿವಾಸಿ, ಎಸ್‌ವೈಎಸ್‌ ಉಜಿರೆ ಸೆಂಟರ್‌ ಕಾರ್ಯಕಾರಿ ಸಮಿತಿ ಸದಸ್ಯ ಹಮೀದ್‌ ಅವರ ಪುತ್ರರಾಗಿರುವ ಅಶ್ರಫ್‌ ಅವರಿಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಪಯ್ಯಂಗಡಿಯಲ್ಲಿ ಅಪಘಾತವಾಗಿತ್ತು. ಕಾರಿನಲ್ಲಿ ಪತ್ನಿ, ಮಕ್ಕಳ ಸಮೇತ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಹೋಗಿದ್ದ ಅವರು ಒಂದೆಡೆ ಕಾರಿನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅತಿವೇಗದಿಂದ ಬಂದಿದ್ದ ಬೈಕೊಂದು ಅವರಿಗೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಆ ಬಳಿಕ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆದರೂ ಚೇತರಿಗೆ ಕಂಡಿರಲಿಲ್ಲ.

ಅವರು ಉಪ್ಪಿನಂಗಡಿಯಲ್ಲಿ ಬ್ರೈಟ್‌ಲುಕ್‌ ವಸ್ತ್ರ ಮಳಿಗೆ ನಡೆಸುತ್ತಿದ್ದರು. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next