Advertisement

ವಿಧವೆ ಮೇಲೆ ಅತ್ಯಾಚಾರ ಮಾಡಲು ಬಂದವನಿಗೆ ಸಾರ್ವಜನಿಕರಿಂದ ಗೂಸಾ

10:49 PM Aug 30, 2019 | Sriram |

ಧಾರವಾಡ: ಕುಡಿದ ಅಮಲಿನಲ್ಲಿ ವಿಧವೆಯೊಬ್ಬರ ಮನೆಗೆ ನುಗ್ಗಿದ ಕುಡುಕನೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಲು ಹೋಗಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ತಾಲೂಕಿನ ಮನಸೂರು ಗ್ರಾಮದಲ್ಲಿ ನಡೆದಿದೆ.

Advertisement

ನರಸಿಂಗಪ್ಪ ಪವಾರ ಎಂಬಾತನೇ ಗೂಸಾ ತಿಂದವನು. ಕುಡಿದ ಅಮಲಿನಲ್ಲಿ ಮಹಿಳೆ ಮನೆಗೆ ನುಗ್ಗಿದ ಈತ ಆಕೆಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ.ಕೂಡಲೇ ಗ್ರಾಮಸ್ಥರು ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next