Advertisement

ಪ್ರೀತಿ ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯಿಂದ ಚಾಕು ಇರಿತ : ಪೊಲೀಸರಿಂದ ಆರೋಪಿಯ ಬಂಧನ

11:11 PM Feb 07, 2021 | Team Udayavani |

ಬೆಂಗಳೂರು: ಪ್ರೀತಿಗೆ ನಿರಾಕರಿಸಿದ ಯುವತಿಗೆ ಪಾಗಲ್‌ ಪ್ರೇಮಿಯೊಬ್ಬ ಆಕೆಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದು ಗಂಭೀರ ಗಾಯ ಗೊಳಿಸಿರುವ ಘಟನೆ ನಂದಿನಿ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ.

Advertisement

ನಂದಿನಿ ಲೇಔಟ್‌ ನಿವಾಸಿ ದೀಪಕ್‌(32) ಬಂಧಿತ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ಲಗ್ಗೆರೆ ನಿವಾಸಿ 21 ವರ್ಷದ ಯುವತಿ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ಈ ಹಿಂದೆ ವಿದ್ಯಾರ್ಥಿನಿ ಲಗ್ಗೆರೆ ಬಳಿ ಪಾಲಕರೊಂದಿಗೆ ವಾಸಿಸುತ್ತಿದ್ದಳು.

ಇದನ್ನೂ ಓದಿ:ಬೈಕಿಗೆ ಕಾರು ಢಿಕ್ಕಿ : ಉಳ್ಳಾಲ ಠಾಣಾ ಎಎಸ್ ಐ ಕಾಲಿಗೆ ಗಂಭೀರ ಗಾಯ

ಅದೇ ಪ್ರದೇಶದಲ್ಲಿ ವಾಸವಾಗಿದ್ದ ಆರೋಪಿ ದೀಪಕ್‌ ಈಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿದ್ದಳು. ಬಳಿಕ ಯುವತಿಯ ಮನೆಯವರು ದೀಪಕ್‌ ನಿಗೆ ಬುದ್ದಿವಾದ ಹೇಳಿದ್ದರು. ಅಷ್ಟಕ್ಕೆ ಸುಮ್ಮನಾಗದ ಆರೋಪಿ ಮತ್ತೆ ತನ್ನ ಹಳೆ ಚಾಳಿ ಮುಂದುವರೆಸಿದ್ದ. ಈತನ ಕಾಟ ತಾಳಲಾರದೇ ಯುವತಿ ಪೋಷಕರು ಮನೆ ಖಾಲಿ ಮಾಡಿ ನಂದಿನಿ ಲೇಔಟ್‌ಗೆ ಮನೆ ಬದಲಾಯಿಸಿದ್ದರು. ಆದರೂ ದೀಪಕ್‌ ಬೇರೆಯವರ ಮೂಲಕ ಯುವತಿಯ ನಂಬರ್‌ ಪಡೆದು ಆಗಾಗ ಕರೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ಸಿಮ್‌ಕಾರ್ಡ್‌ ಬದಲಾಯಿಸಿದ್ದಳು.

Advertisement

ಅದರಿಂದ ಆಕ್ರೋಶಗೊಂಡ ಆರೋಪಿ, ಜ.25ರಂದು ಸ್ನೇಹಿತನ ಜತೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಚೂರಿಯಿಂದ ಕತ್ತು, ಬೆನ್ನು, ಕೈ ಭಾಗಕ್ಕೆ ಇರಿದು ಹಲ್ಲೆ ನಡೆಸಿ ಪರಾರಿಯಾಗಿದ್ದ. ನಂತರ ಸ್ಥಳೀಯರು ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ಸಂಬಂಧ ಆಕೆಯ ತಾಯಿ ದೂರು ನೀಡಿದ್ದರು ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next