Advertisement

ಮನೆಮುಂದೆ ನಿಲ್ಲಿಸಿದ ರಿಕ್ಷಾ, ಬೈಕಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

08:08 PM Sep 10, 2021 | Team Udayavani |

ಶ್ರೀರಂಗಪಟ್ಟಣ : ವ್ಯಕ್ತಿಯೊಬ್ಬರ ಮೇಲಿನ ವೈಯಕ್ತಿಕ ದ್ವೇಷಕ್ಕೆ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಮತ್ತು ಆಟೋಗೆ ಕಿಡಿಗೇಡಿಗಳು ಬೆಂಕಿ ಇಟ್ಟು ಸುಟ್ಟು ಹಾಕಲು ಯತ್ನಿಸಿರೋ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಶ್ರೀರಂಗಪಟ್ಟಣ ತಾಲೂಕಿನ ಅಚ್ಚಪ್ಪನ ಕೊಪ್ಪಲು ಗ್ರಾಮದ ವಿದ್ಯಾನಗರದಲ್ಲಿ ಈ ಘಟನೆ ನಡೆದಿದ್ದು ಮಹದೇವು ಎಂಬುವರಿಗೆ ಸೇರಿದ ಆಟೋ ಮತ್ತು ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿ ಹತ್ತಿ ಉರಿಯುತ್ತಿರುವುದನ್ನ ಗಮನಿಸಿದ ಮನೆಯವರು ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಆಟೋ ಮತ್ತು ಬೈಕ್ ಹಾನಿಯಾಗಿದೆ.

ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಗೋವಾ ರಾಜ್ಯವನ್ನು ಸಂಪೂರ್ಣ ಲಸಿಕೆ ಪಡೆದ ರಾಜ್ಯ ಎಂದು ಘೋಷಿಸಲು ಸಹಕರಿಸಿ : ಗೋವಾ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next