Advertisement

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

10:47 PM Oct 26, 2021 | Team Udayavani |

ಸುರತ್ಕಲ್‌: ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್‌ ಖರೀದಿಸಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಬಂಧಿತ ಆರೋಪಿಯಾಗಿದ್ದಾನೆ. ಬೈಕಂಪಾಡಿಯ ಮೊಬೈಲ್‌ ಅಂಗಡಿಗೆ ಮೊಬೈಲ್‌ ಖರೀದಿಸಲು ಯುವತಿ ಹೋಗಿದ್ದು, ಈ ಸಂದರ್ಭ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ.

ತನ್ನ ನಿಜವಾದ ಹೆಸರನ್ನು ಮರೆ ಮಾಚಿ ಹಿಂದೂ ಎಂದು ತಿಳಿಸಿ ಪ್ರೀತಿಯ ನಾಟಕವಾಡಿ ಕಳೆದ ಆಗಸ್ಟ್‌ನಲ್ಲಿ ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಐಪಿಸಿ ಕಲಂ 376, 354, 506ರಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

Advertisement

Udayavani is now on Telegram. Click here to join our channel and stay updated with the latest news.

Next