Advertisement

ಕೆರೆಯಲ್ಲಿ ಈಜಲು ಹೋಗಿ ಮೂವರು ಯುವಕರು ನೀರುಪಾಲು

10:28 PM Apr 22, 2022 | Team Udayavani |

ತುಮಕೂರು :ಕೆರೆಯಲ್ಲಿ ಈಜಲು ಹೋಗಿ ಮೂವರು ಯುವಕರು ನೀರುಪಾಲಾದ ಘಟನೆ ತುಮಕೂರು ನಗರ ಹೊರವಲಯದ ತಿಮ್ಮಲಾಪುರದಲ್ಲಿ ಶುಕ್ರವಾರ ನಡೆದಿದೆ.

Advertisement

ಭರತ್ (12), ಆನಂದ್ (10) ಹಾಗೂ ವಿಶ್ವಾಸ್(11) ಮೃತ‌ ದುರ್ದೈವಿಗಳು.

ನಗರ ಸಮೀಪದ ತಿಮ್ಲಾಪುರ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಸ್ನೇಹಿತರು. ಈ ವೇಳೆ ನೀರಿನಲ್ಲಿ ಮುಳುಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಕೆರೆಯ ದಡದಲ್ಲಿ ಬಟ್ಟೆ, ಚಪ್ಪಲಿ ನೋಡಿ ಯುವಕರು ನೀರಿನಲ್ಲಿ ಮುಳುಗಿರುವುದು ಪತ್ತೆಯಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಶವನ್ನು ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next