Advertisement

ವಿದ್ಯುತ್ ವ್ಯತ್ಯಯ :ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

10:20 PM May 20, 2022 | Team Udayavani |

ಕಳಸ : ವಿದ್ಯುತ್ ವ್ಯತ್ಯಯ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ.

Advertisement

ಮೆಸ್ಕಾಂ ಸಿಬ್ಬಂದಿ ಹೇಮಂತ್ ಎಂಬುವರ ಮೇಲೆ ಆರೇಳು ಜನರ ತಂಡ ಹಲ್ಲೆ ಮಾಡಿದ್ದಾರೆ. ರಂಜನ್, ಆದರ್ಶ್, ಸುಂದರೇಶ್ ಸೇರಿದಂತೆ ಇನ್ನೂ ಕೆಲವರು ಮೆಸ್ಕಾಂ ಸಿಬ್ಬಂದಿ ಹೇಮಂತ್ ಗೆ ಹಲ್ಲೆ ಮಾಡಿದ್ದಾರೆ.

ಆರೋಪಿಗಳು ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆ ಮಾಡಿದ್ದಲ್ಲದೇ ಒಂದು ವೇಳೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next