Advertisement

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಸಾವು

12:05 AM May 24, 2022 | Team Udayavani |

ಮಂಗಳೂರು: ಮಂಗಳೂರು ಪಡೀಲ್‌ ನಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬಿ.ಸಿ.ರೋಡ್‌ ಕೈಕುಂಜೆ ಪೂರ್ವಬಡಾವಣೆ ನಿವಾಸಿ, ಉಡುಪಿ ಜಿ.ಪಂ. ಎಂಜಿನಿಯರಿಂಗ್‌ ವಿಭಾಗದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಕೆ.ಎನ್‌. ರಮೇಶ್‌(67) ಅವರು ಮೇ 22 ರಂದು ಸಾವನ್ನಪ್ಪಿದ್ದರು.

Advertisement

ರಮೇಶ್‌ ಅವರು ಮೇ 7ರಂದು ಸಂಜೆ ಸ್ಕೂಟರ್‌ನಲ್ಲಿ ಮಂಗಳೂರು ಕಡೆಯಿಂದ ಬಿ.ಸಿ.ರೋಡ್‌ಗೆ ಹೋಗುತ್ತಿದ್ದಾಗ ಪಡೀಲ್‌ನಲ್ಲಿ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

ಭಾಲ್ಕಿ, ಹಾಸನ, ಬೆಳ್ತಂಗಡಿ, ಸುಳ್ಯ ಸೇರಿದಂತೆ ರಾಜ್ಯದ ವಿವಿಧೆಡೆ ಲೆಕ್ಕಾಧೀಕ್ಷಕ ಸಹಿತ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಉಡುಪಿ ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಲ್ಲಿ ಜಿಲ್ಲಾ ಲೆಕ್ಕಪತ್ರ ಪರಿಶೋಧಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next