Advertisement

Crime News: ಮಾರಕಾಸ್ತ್ರಗಳಿಂದ ಪತ್ನಿಯ ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

03:19 PM Jul 28, 2023 | Team Udayavani |

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿಯೊಬ್ಬ ಮಾರಕಾಸ್ತ್ರಗಳಿಂದ ಹೊಡೆದು ಆಕೆಯನ್ನು ಕೊಲೆಗೈದು ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ಚಂದ್ರಾಲೇಔಟ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಹೊಸೂರು ಮೂಲದ ಗೀತಾ (33) ಕೊಲೆಯಾದವರು. ಕೃತ್ಯ ಎಸಗಿದ ಆಕೆಯ ಪತಿ ವೆಂಕಟೇಶ್‌ (38) ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಮೂಡಲಪಾಳ್ಯದ ವೆಂಕಟೇಶ್‌ 13 ವರ್ಷಗಳ ಹಿಂದೆ ಹೊಸೂರು ಮೂಲದ ಗೀತಾರನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಈ ಮಧ್ಯೆ ಗೀತಾ ಬೇರೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಈ ವಿಚಾರ ತಿಳಿದ ವೆಂಕಟೇಶ್‌ ಪತ್ನಿಗೆ ಬುದ್ಧಿವಾದ ಹೇಳಿದ್ದಾರೆ. ಆದರೂ ಆಕೆ ತನ್ನ ಅಕ್ರಮ ಸಂಬಂಧ ಮುಂದುವರಿಸಿದ್ದರು. ಅದರಿಂದ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು.

ಕೆಲ ದಿನಗಳ ಹಿಂದೆ ಗೀತಾ ಮನೆ ಬಿಟ್ಟು ಹೋಗಿದ್ದು, ವಾಪಸ್‌ ಬಂದಿದ್ದರು. ಬಳಿಕ ಗಂಡನ ಜತೆ ಮತ್ತೂಮ್ಮೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿ, ವಾಪಸ್‌ ಬಂದಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಾರಕಾಸ್ತ್ರದಿಂದ ಕೊಲೆ: ಬುಧವಾರ ರಾತ್ರಿ ಮನೆಗೆ ಬಂದ ವೆಂಕಟೇಶ್‌ಗೆ ಪತ್ನಿಯ ಅಕ್ರಮ ಸಂಬಂಧ ವಿಡಿಯೋ, ಫೋಟೋಗಳು ಸಿಕ್ಕಿದ್ದವು. ಹೀಗಾಗಿ ಬುಧವಾರ ರಾತ್ರಿ ಪತ್ನಿ ಗೀತಾ ಜತೆ ಗಲಾಟೆ ಮಾಡಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಮಾರಕಾಸ್ತ್ರದಿಂದ ಆಕೆಯ ತಲೆಗೆ ಹೊಡೆದು ಕೊಲೆಗೈದಿದ್ದಾರೆ.

Advertisement

ನಂತರ ತನ್ನ ಅತ್ತೆ ರತ್ನಮ್ಮಗೆ ಕರೆ ಮಾಡಿ, “ನಿಮ್ಮ ಮಗಳು ಗೀತಾಳನ್ನು ನಾನು ಕೊಲೆಗೈದಿದ್ದೇನೆ. ಆಕೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕೃತ್ಯ ಎಸಗಿದ್ದೇನೆ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಬಳಿಕ ನೇರವಾಗಿ ಠಾಣೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಚಂದ್ರಾಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next