Advertisement

ಇಬ್ಬರು ರೌಡಿಶೀಟರ್‌ ಸೇರಿ 10 ಮಂದಿ ಬಂಧನ

07:55 PM May 13, 2022 | Team Udayavani |

ಬೆಂಗಳೂರು: ಮಾರಕಾಸ್ತ್ರ ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ರೌಡಿಶೀಟರ್‌ ಸೇರಿ 10 ಜನರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ.

Advertisement

ಹನುಮಂತನಗರ ಪೊಲೀಸ್‌ ಠಾಣೆ ರೌಡಿಶೀಟರ್‌ಗಳಾದ ಸಾಗರ ಅಲಿಯಾಸ್‌ ವೀರು ಮತ್ತು ಸಂಜಯ ಅಲಿಯಾಸ್‌ ಸಂಜು ಹಾಗೂ ಅವರ 8 ಮಂದಿ ಸಹಚರರನ್ನು ಬಂಧಿಸಲಾಗಿದೆ. ಅವರಿಂದ ಎರಡು ಕಾರುಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.

ಮೇ 12ರಂದು ರಾತ್ರಿ ಪಿಇಎಸ್‌ ಕಾಲೇಜಿನ ಬಿಡಬ್ಲ್ಯೂಎಸ್‌ಎಸ್‌ಬಿ ಪಾರ್ಕ್‌ ಬಳಿ ಅಪರಿಚಿತರ ಗುಂಪೊಂದು ಮಾರಕಾಸ್ತ್ರ  ಹಿಡಿದು ದರೋಡೆಗೆ ಹೊಂಚು ಹಾಕಿ ಕುಳಿತಿರುವ ಬಗ್ಗೆ ದೊರಕಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ರಾತ್ರಿ ವೇಳೆ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ದರೋಡೆ ದರೋಡೆ ಮಾಡಲು ಸಂಚು ರೂಪಿಸಿರುವುದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಈ ಸಂಬಂಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next