Advertisement

ಮದುವೆ ಮೆರವಣಿಗೆ ವೇಳೆ ವಾಹನ ಢಿಕ್ಕಿ: ನಾಲ್ವರ ಸಾವು

08:07 PM May 08, 2022 | Team Udayavani |

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕಡತಾಲ್‌ ತಾಂಡಾದಲ್ಲಿ ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದವರ ಮೇಲೆ ಡಿಜೆ ಇದ್ದ ಮಿನಿ ಲಾರಿ ಹರಿದು ನಾಲ್ವರು ಮೃತಪಟ್ಟು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Advertisement

ಸೇಡಂನ ಮೆದಕ ತಾಂಡಾದ ಸುಗುಣಾ ಬಾಯಿ ಚೌಹಾಣ್‌ (40), ತೆಲಂಗಾಣದ ದುಂಕುಡನಾಯಕ ತಾಂಡಾದ ವಿಜ್ಜಿಬಾಯಿ ರಾಥೋಡ್‌ (30), ಕುಮಾರನಾಯಕ ರಾಥೋಡ್‌ (35) ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮದುವೆ ಹಿಂದಿನ ದಿನ ರಾತ್ರಿ ಮದುಮಗಳನ್ನು ಮದನಾ ತಾಂಡಾಕ್ಕೆ ಮೆರವಣಿಗೆಯಲ್ಲಿ ಕರೆ ತರುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next